<p><strong>ಬೆಂಗಳೂರು:</strong> ಸಚಿವರಾದ ಎಚ್.ಕೆ. ಪಾಟೀಲ, ಪ್ರಿಯಾಂಕ್ ಖರ್ಗೆ ಆಣತಿಯಂತೆ ಲೋಕಭವನ ಮತ್ತು ಆರ್ಎಸ್ಎಸ್ನ ಕಚೇರಿ ಕೇಶವಕೃಪಾದ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಆಗ್ರಹಿಸಿದರು.</p>.<p>ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ಸದಸ್ಯರು ಕದ್ದಾಲಿಕೆ ವಿಷಯ ಪ್ರಸ್ತಾಪಿಸಿದರು.</p>.<p>‘ವಂದನೆಯ ಬದಲಿಗೆ ಖಂಡನಾ ನಿರ್ಣಯದ ಮೂಲಕ ರಾಜ್ಯಪಾಲರಿಗೆ ಅಗೌರವ ತೋರಿಸಿದ್ದಾರೆ. ಆದ್ದರಿಂದ ಈ ಕುರಿತು ಸರ್ಕಾರ ಕ್ಷಮೆ ಯಾಚಿಸಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪಟ್ಟು ಹಿಡಿದರು. ಬಿಜೆಪಿ ಸದಸ್ಯರು ಧ್ವನಿಗೂಡಿಸಿದರು.</p>.<p>ಆಗ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು, ‘ದೆಹಲಿಯಿಂದ ಬರುವ ದೂರವಾಣಿ ಕರೆಗಳ ನಿರ್ದೇಶನದಂತೆಯೇ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಪೂರ್ತಿ ಭಾಷಣ ಓದಲಿಲ್ಲ’ ಎಂದರು.</p>.<p>ಅವರ ಮಾತನ್ನೇ ಗಟ್ಟಿಯಾಗಿ ಹಿಡಿದುಕೊಂಡ ಬಿಜೆಪಿ ಸದಸ್ಯರು, ‘ಹಾಗಿದ್ದರೆ ನೀವು ಲೋಕಭವನದ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದ್ದೀರಾ? ದೆಹಲಿಯಿಂದ ಎಷ್ಟು ಕರೆಗಳು ಬಂದಿವೆ ಮತ್ತು ಯಾವ ನಿರ್ದೇಶನ ನೀಡಿದ್ದಾರೆ ಎಂಬುದು ನಿಮಗೆ ಗೊತ್ತಿರಬೇಕು. ಅವುಗಳ ವಿವರಗಳನ್ನು ಬಹಿರಂಗಪಡಿಸಿ ಎಂದು ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಚಿವರಾದ ಎಚ್.ಕೆ. ಪಾಟೀಲ, ಪ್ರಿಯಾಂಕ್ ಖರ್ಗೆ ಆಣತಿಯಂತೆ ಲೋಕಭವನ ಮತ್ತು ಆರ್ಎಸ್ಎಸ್ನ ಕಚೇರಿ ಕೇಶವಕೃಪಾದ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ ಆಗ್ರಹಿಸಿದರು.</p>.<p>ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಬಿಜೆಪಿ ಸದಸ್ಯರು ಕದ್ದಾಲಿಕೆ ವಿಷಯ ಪ್ರಸ್ತಾಪಿಸಿದರು.</p>.<p>‘ವಂದನೆಯ ಬದಲಿಗೆ ಖಂಡನಾ ನಿರ್ಣಯದ ಮೂಲಕ ರಾಜ್ಯಪಾಲರಿಗೆ ಅಗೌರವ ತೋರಿಸಿದ್ದಾರೆ. ಆದ್ದರಿಂದ ಈ ಕುರಿತು ಸರ್ಕಾರ ಕ್ಷಮೆ ಯಾಚಿಸಬೇಕು’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪಟ್ಟು ಹಿಡಿದರು. ಬಿಜೆಪಿ ಸದಸ್ಯರು ಧ್ವನಿಗೂಡಿಸಿದರು.</p>.<p>ಆಗ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು, ‘ದೆಹಲಿಯಿಂದ ಬರುವ ದೂರವಾಣಿ ಕರೆಗಳ ನಿರ್ದೇಶನದಂತೆಯೇ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅವರು ಪೂರ್ತಿ ಭಾಷಣ ಓದಲಿಲ್ಲ’ ಎಂದರು.</p>.<p>ಅವರ ಮಾತನ್ನೇ ಗಟ್ಟಿಯಾಗಿ ಹಿಡಿದುಕೊಂಡ ಬಿಜೆಪಿ ಸದಸ್ಯರು, ‘ಹಾಗಿದ್ದರೆ ನೀವು ಲೋಕಭವನದ ದೂರವಾಣಿ ಕರೆಗಳನ್ನು ಕದ್ದಾಲಿಕೆ ಮಾಡುತ್ತಿದ್ದೀರಾ? ದೆಹಲಿಯಿಂದ ಎಷ್ಟು ಕರೆಗಳು ಬಂದಿವೆ ಮತ್ತು ಯಾವ ನಿರ್ದೇಶನ ನೀಡಿದ್ದಾರೆ ಎಂಬುದು ನಿಮಗೆ ಗೊತ್ತಿರಬೇಕು. ಅವುಗಳ ವಿವರಗಳನ್ನು ಬಹಿರಂಗಪಡಿಸಿ ಎಂದು ಪಟ್ಟು ಹಿಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>