ಪಟ್ಟಿ ಪ್ರಕಟವಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನನ್ನ ಕುಟುಂಬ ಸೇರಿದಂತೆ ಪ್ರಖರ ಹಿಂದುತ್ವವಾದಿಗಳಾದ ಸಿ.ಟಿ. ರವಿ, ನಳಿನ್ಕುಮಾರ್ ಕಟೀಲ್, ಪ್ರತಾಪ ಸಿಂಹ ಅವರಿಗೆ ಟಿಕೆಟ್ ತಪ್ಪಲು ಯಡಿಯೂರಪ್ಪ ಕಾರಣ. ಪಟ್ಟಿ ಪ್ರಕಟವಾದ ಬಳಿಕ ಕರೆ ಮಾಡಿದ್ದ ಪಕ್ಷದ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಕಾಂತೇಶ್ಗೆ ವಿಧಾನ ಪರಿಷತ್ತಿನ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ನಾನು ಪ್ರತಿಕ್ರಿಯೆ ನೀಡಿಲ್ಲ. ಶುಕ್ರವಾರ (ಮಾ.15) ಆಪ್ತರ ಸಭೆ ಕರೆದಿದ್ದು, ಮುಂದಿನ ನಿರ್ಧಾರವನ್ನು ಅಲ್ಲಿಯೇ ತಿಳಿಸುವೆ’ ಎಂದು ಹೇಳಿದ್ದಾರೆ.