<p><strong>ನವದೆಹಲಿ:</strong> ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒಂದು ವರ್ಷದಿಂದ ಸತತವಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ತಿದ್ದಿಕೊಳ್ಳಲು ಹಲವು ಅವಕಾಶ ನೀಡಿದರೂ ಸುಧಾರಿಸಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. </p>.<p>ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಅವರು ಪಕ್ಷದ ಚೌಕಟ್ಟಿನಲ್ಲೇ ಮಾತನಾಡಬೇಕಿತ್ತು. ಬಹಳ ದಿನಗಳ ಹಿಂದೆಯೇ ಉಚ್ಚಾಟನೆ ಮಾಡುತ್ತಾರೆ ಎಂಬ ಮಾಹಿತಿ ಇತ್ತು. ಈ ಹಿಂದೆ ಬಹಳಷ್ಟು ಹಿರಿಯ ನಾಯಕರನ್ನು ಉಚ್ಚಾಟಿಸಿದ ಉದಾಹರಣೆಗಳಿವೆ. ಈಚಿನ ಬೆಳವಣಿಗೆಗಳಿಂದ ಕಾರ್ಯಕರ್ತರು ಬೇಸರಗೊಂಡಿದ್ದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಿದೆ’ ಎಂದರು. </p>.<p>ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ‘ಗೌರವಾನ್ವಿತ ಯತ್ನಾಳ ಅವರನ್ನು ಪಕ್ಷ ಆರು ವರ್ಷಗಳ ಅವಧಿಗೆ ಉಚ್ಚಾಟಿಸಿದೆ. ಪಕ್ಷದ ಆಂತರಿಕ ವಿಷಯ ನಾಲ್ಕು ಗೋಡೆಗಳ ನಡುವೆ ಚರ್ಚೆಯಾಗಬೇಕಿತ್ತು. ಈಗಿನ ಬೆಳವಣಿಗೆ ನಮ್ಮೆಲ್ಲರಿಗೂ ಪಾಠವಾಗಬೇಕು’ ಎಂದರು. </p>.<p>‘ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೂಲಕ ಪಕ್ಷ ಸಂಘಟನೆ ಆಗಲಿದೆ. ಅವರಿಗೆ ಹಲವು ಸವಾಲುಗಳಿವೆ. ಈಗಿನ ಬೆಳವಣಿಗೆ ಬಗ್ಗೆ ಯಾವ ಕಾರ್ಯಕರ್ತರೂ ಸಂಭ್ರಮ ಪಡುವ ಹಾಗಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒಂದು ವರ್ಷದಿಂದ ಸತತವಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ತಿದ್ದಿಕೊಳ್ಳಲು ಹಲವು ಅವಕಾಶ ನೀಡಿದರೂ ಸುಧಾರಿಸಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. </p>.<p>ಗುರುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಅವರು ಪಕ್ಷದ ಚೌಕಟ್ಟಿನಲ್ಲೇ ಮಾತನಾಡಬೇಕಿತ್ತು. ಬಹಳ ದಿನಗಳ ಹಿಂದೆಯೇ ಉಚ್ಚಾಟನೆ ಮಾಡುತ್ತಾರೆ ಎಂಬ ಮಾಹಿತಿ ಇತ್ತು. ಈ ಹಿಂದೆ ಬಹಳಷ್ಟು ಹಿರಿಯ ನಾಯಕರನ್ನು ಉಚ್ಚಾಟಿಸಿದ ಉದಾಹರಣೆಗಳಿವೆ. ಈಚಿನ ಬೆಳವಣಿಗೆಗಳಿಂದ ಕಾರ್ಯಕರ್ತರು ಬೇಸರಗೊಂಡಿದ್ದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಿದೆ’ ಎಂದರು. </p>.<p>ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ‘ಗೌರವಾನ್ವಿತ ಯತ್ನಾಳ ಅವರನ್ನು ಪಕ್ಷ ಆರು ವರ್ಷಗಳ ಅವಧಿಗೆ ಉಚ್ಚಾಟಿಸಿದೆ. ಪಕ್ಷದ ಆಂತರಿಕ ವಿಷಯ ನಾಲ್ಕು ಗೋಡೆಗಳ ನಡುವೆ ಚರ್ಚೆಯಾಗಬೇಕಿತ್ತು. ಈಗಿನ ಬೆಳವಣಿಗೆ ನಮ್ಮೆಲ್ಲರಿಗೂ ಪಾಠವಾಗಬೇಕು’ ಎಂದರು. </p>.<p>‘ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೂಲಕ ಪಕ್ಷ ಸಂಘಟನೆ ಆಗಲಿದೆ. ಅವರಿಗೆ ಹಲವು ಸವಾಲುಗಳಿವೆ. ಈಗಿನ ಬೆಳವಣಿಗೆ ಬಗ್ಗೆ ಯಾವ ಕಾರ್ಯಕರ್ತರೂ ಸಂಭ್ರಮ ಪಡುವ ಹಾಗಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>