ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತರು ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂವು ಇಟ್ಟಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ಮೀಸಲಾತಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ 2A ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ನೀಡಲು ಸದ್ಯಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಆಗಾದರೆ ಈ ಸಮುದಾಯಗಳಿಗೆ ಸರ್ಕಾರದ ಉತ್ತರವೇನು? ಎಂದು ಟ್ವಿಟರ್ನಲ್ಲಿ ಪ್ರಶ್ನಿಸಿದೆ.
ಪಂಚಮಸಾಲಿ ಲಿಂಗಾಯತರು ಹಾಗೂ ಒಕ್ಕಲಿಗರ #KiviMeleHoova ಇಟ್ಟಿದೆ ಬಿಜೆಪಿ ಸರ್ಕಾರ.@BSBommai ಅವರು ಹೂವಿನ ವ್ಯಾಪಾರಿ ಇದ್ದಂಗೆ, ಧಾರಾಳವಾಗಿ ಎಲ್ಲರ ಕಿವಿಗೂ ಹೂವಿಡುತ್ತಾರೆ!
2A ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ನೀಡಲು ಸದ್ಯಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ, ಈ ಸಮುದಾಯಗಳಿಗೆ ಸರ್ಕಾರದ ಉತ್ತರವೇನು? pic.twitter.com/6kLmGEx3vR