ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ಇನ್ನಷ್ಟು ಪ್ರಖರಗೊಳಿಸಿ ಮುನ್ನುಗ್ಗುತ್ತಿರುವ ಬೆನ್ನಲ್ಲೇ ಬಂಡಾಯದಿಂದ ತತ್ತರಿಸಿದೆ. ಆದರೆ, ಆ ಬಂಡಾಯವನ್ನು ಅರಗಿಸಿಕೊಳ್ಳುವ ಶಕ್ತಿ ಇದೆ. ಹೊಸ ಮುಖಗಳಿಗೆ, ಹೊಸ ಪೀಳಿಗೆಯನ್ನು ರಾಜಕೀಯದಲ್ಲಿ ಮುಂಚೂಣಿಗೆ ತರುವುದೂ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ.