<p><strong>ಕಲಬುರ್ಗಿ: </strong>ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದನ್ನು ತಡೆಯಲು ಕೇಂದ್ರ ಸರ್ಕಾರವು ಲಾಕ್ಡೌನ್ ಘೋಷಿಸಿದ್ದು ಸರಿಯಾದ ಕ್ರಮ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.</p>.<p>ಸೇಡಂನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೋಂಕಿನ ತೀವ್ರತೆಯನ್ನು ಗಂಭೀರವಾಗಿ ಪರಿಗಣಿಸಿದ ನರೇಂದ್ರಿ ಮೋದಿಯವರು ಲಾಕ್ಡೌನ್ ಘೋಷಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು. ಈ ಕ್ರಮವನ್ನು ವಿಶ್ವದ ನಾಯಕರೇ ಶ್ಲಾಘಿಸಿದ್ದಾರೆ’ ಎಂದರು.</p>.<p>‘ಲಾಕ್ಡೌನ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕಾರಣಕ್ಕಾಗಿ ಟೀಕಿಸುತ್ತಿದ್ದಾರೆ ಹೊರತು ಮತ್ತೇನೂ ಇಲ್ಲ. ಸಂಕಷ್ಟದಲ್ಲಿ ಸಿಲುಕಿದವರಿಗೆ ಬಿಜೆಪಿ ವತಿಯಿಂದ ಸಾಕಷ್ಟು ಸಹಾಯ ಮಾಡಲಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಅತಂತ್ರ ಸ್ಥಿತಿ ಎದುರಿಸಿದ 3 ಕೋಟಿ ಹೆಚ್ಚು ಜನರು, ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ಒದಗಿಸುವಲ್ಲಿ, ತಮ್ಮೂರಿಗೆ ತಲುಪಿಸುವಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶ್ರಮಿಸಿದ್ದಾರೆ. ಸಮಸ್ಯೆ ನಿವಾರಿಸಲು ಆದ್ಯತೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ತಮಿಳುನಾಡಿನ ಡಿಎಂಕೆ ಶಾಸಕರೊಬ್ಬರು ಕೋವಿಡ್ಗೆ ಸಾವನ್ನಪ್ಪಿದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೊರೊನಾಗೆ ಜಾತಿ, ಮತ, ಧರ್ಮದ ತಾರತಮ್ಯವಿಲ್ಲ. ಯಾರಿಗಾದೂ ಬರಬಹುದು. ಜನರೊಂದಿಗೆ ಬೆರೆಯುವಾಗ, ಸುತ್ತಾಡುವಾಗ ಜನಪ್ರತಿನಿಧಿಯೂ ಎಚ್ಚರ ವಹಿಸಬೇಕಾದದ್ದು ಮುಖ್ಯ’ ಎಂದರು.</p>.<p>‘ಕೊರೊನಾ ಸೋಂಕು ಆವರಿಸಿಕೊಂಡಿರುವ ಈ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಮುನ್ನೆಚ್ಚರಿಕೆ ವಹಿಸಬೇಕು. ಇದರ ಬಗ್ಗೆ ಅರಿವು ಮೂಡಿಸಲು ಮತ್ತು ಕೊರೊನಾ ನಿಯಂತ್ರಣಕ್ಕೆ ಪಕ್ಷದಿಂದ ಯಾವುದೆಲ್ಲ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಯಲು ಇಲ್ಲಿ ಸಭೆ ಆಯೋಜಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ದೇಶದಲ್ಲಿ ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದನ್ನು ತಡೆಯಲು ಕೇಂದ್ರ ಸರ್ಕಾರವು ಲಾಕ್ಡೌನ್ ಘೋಷಿಸಿದ್ದು ಸರಿಯಾದ ಕ್ರಮ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.</p>.<p>ಸೇಡಂನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸೋಂಕಿನ ತೀವ್ರತೆಯನ್ನು ಗಂಭೀರವಾಗಿ ಪರಿಗಣಿಸಿದ ನರೇಂದ್ರಿ ಮೋದಿಯವರು ಲಾಕ್ಡೌನ್ ಘೋಷಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು. ಈ ಕ್ರಮವನ್ನು ವಿಶ್ವದ ನಾಯಕರೇ ಶ್ಲಾಘಿಸಿದ್ದಾರೆ’ ಎಂದರು.</p>.<p>‘ಲಾಕ್ಡೌನ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕಾರಣಕ್ಕಾಗಿ ಟೀಕಿಸುತ್ತಿದ್ದಾರೆ ಹೊರತು ಮತ್ತೇನೂ ಇಲ್ಲ. ಸಂಕಷ್ಟದಲ್ಲಿ ಸಿಲುಕಿದವರಿಗೆ ಬಿಜೆಪಿ ವತಿಯಿಂದ ಸಾಕಷ್ಟು ಸಹಾಯ ಮಾಡಲಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಅತಂತ್ರ ಸ್ಥಿತಿ ಎದುರಿಸಿದ 3 ಕೋಟಿ ಹೆಚ್ಚು ಜನರು, ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ಒದಗಿಸುವಲ್ಲಿ, ತಮ್ಮೂರಿಗೆ ತಲುಪಿಸುವಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶ್ರಮಿಸಿದ್ದಾರೆ. ಸಮಸ್ಯೆ ನಿವಾರಿಸಲು ಆದ್ಯತೆ ನೀಡಲಾಗಿದೆ’ ಎಂದು ತಿಳಿಸಿದರು.</p>.<p>ತಮಿಳುನಾಡಿನ ಡಿಎಂಕೆ ಶಾಸಕರೊಬ್ಬರು ಕೋವಿಡ್ಗೆ ಸಾವನ್ನಪ್ಪಿದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೊರೊನಾಗೆ ಜಾತಿ, ಮತ, ಧರ್ಮದ ತಾರತಮ್ಯವಿಲ್ಲ. ಯಾರಿಗಾದೂ ಬರಬಹುದು. ಜನರೊಂದಿಗೆ ಬೆರೆಯುವಾಗ, ಸುತ್ತಾಡುವಾಗ ಜನಪ್ರತಿನಿಧಿಯೂ ಎಚ್ಚರ ವಹಿಸಬೇಕಾದದ್ದು ಮುಖ್ಯ’ ಎಂದರು.</p>.<p>‘ಕೊರೊನಾ ಸೋಂಕು ಆವರಿಸಿಕೊಂಡಿರುವ ಈ ದಿನಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಮುನ್ನೆಚ್ಚರಿಕೆ ವಹಿಸಬೇಕು. ಇದರ ಬಗ್ಗೆ ಅರಿವು ಮೂಡಿಸಲು ಮತ್ತು ಕೊರೊನಾ ನಿಯಂತ್ರಣಕ್ಕೆ ಪಕ್ಷದಿಂದ ಯಾವುದೆಲ್ಲ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ತಿಳಿಯಲು ಇಲ್ಲಿ ಸಭೆ ಆಯೋಜಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>