ಬೆಟ್ಟದ ಕೆಳಭಾಗದಲ್ಲಿ ಪಾದಗಟ್ಟೆ ಬಳಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲಾಗುತ್ತಿದೆ. ರಾಮನ ಭಕ್ತ ಹನುಮಂತನ ಕ್ಷೇತ್ರ ಅಂಜನಾದ್ರಿ ಅಭಿವೃದ್ಧಿ ಭಾಗ್ಯ ಬಿಜೆಪಿಗೆ ಲಭಿಸಿದ್ದು ನಮ್ಮ ಸುದೈವ. ಪ್ರದರ್ಶನ ಪಥ, ವಾಣಿಜ್ಯ ಸಂಕೀರ್ಣ, ಶೌಚಾಲಯ ಸೇರಿ ಮೂಲಸೌಕರ್ಯ ಕಲ್ಪಿಸಲಾಗುವುದು’ ಎಂದರು.