ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ದೇಶ ಆರ್ಥಿಕವಾಗಿ ಕುಸಿದಿದೆ. ಹಣದುಬ್ಬರ ನಿಯಂತ್ರಣಕ್ಕೆ ಸಿಗದೆ ಮೇಲೇರುತ್ತಿದೆ. ದೇಶವನ್ನು ಆಡಳಿತಾತ್ಮಕವಾಗಿ ಸೋಲಿಸಿದ್ದಾರೆ. ಆದರೆ, ಬಿಜೆಪಿಯ ಸುಳ್ಳಿನ ಕಾರ್ಖಾನೆಗಳು ಪ್ರಧಾನಿ ಭೇಟಿ ವೇಳೆ ಹೊಸ ಸುಳ್ಳು ಸೃಷ್ಟಿಸಲು ಸಿದ್ಧವಾಗಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.