ಕೊಳವೆ ಬಾವಿ ಕೊರೆಸುವ ವೆಚ್ಚವೂ ಬಹುತೇಕ ದುಪ್ಪಟ್ಟಾಗಿದೆ. ಈ ವಿಷಯದಲ್ಲೂ ಸರಿಯಾದ ನೀತಿ ಇಲ್ಲ. ಸಮರ್ಪಕ ಸಂಚಾರ ವ್ಯವಸ್ಥೆ ಇಲ್ಲದೆ, ಐಟಿ ಉದ್ಯೋಗಿಗಳು ರಸ್ತೆಯಲ್ಲಿ ಬಹಳ ಸಮಯ ಕಳೆಯುವ ದುಃಸ್ಥಿತಿ ಬಂದಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ, ಟ್ರಾಫಿಕ್ ಸಮಸ್ಯೆ ಇರುವಲ್ಲಿಗೆ ತೆರಳಿ, ಅಲ್ಲಿ ನಿಂತು ಗಮನಿಸಿ, ಸಮಸ್ಯೆ ಪರಿಹಾರಕ್ಕೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತಂದಿದ್ದರು ಎಂದು ತಿಳಿಸಿದರು.