ಅ.14ರಂದು ಅಮಾವಾಸ್ಯೆ ಕಳೆದ ನಂತರ ಬಿಜೆಪಿ ವರಿಷ್ಠರ ಜತೆ ಮುಂದಿನ ಯೋಜನೆಗಳ ಕುರಿತು ಚರ್ಚೆ ನಡೆಸುವರು. ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡುವರು. ಮುಂದಿನ ಲೋಕಸಭಾ ಚುನಾವಣೆಗೆ ಕ್ಷೇತ್ರಗಳನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಸಲು ಈ ಭೇಟಿ ಪೂರ್ವಭಾವಿ ವೇದಿಕೆಯಾಗಲಿದೆ. ಆದರೆ, ಯಾವ, ಯಾವ ನಾಯಕರನ್ನು ಭೇಟಿ ಮಾಡುತ್ತಾರೆ ಎನ್ನುವುದು ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.