‘ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜ. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯ ಇದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯ. ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ. ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ. ನಮಗೆ ಆತ್ಮೀಯರಾಗಿರುವವರನ್ನು ನಾವು ಕರೆಯುತ್ತೇವೆ. ಅದರಲ್ಲಿ ತಪ್ಪೇನಿದೆ’ ಎಂದರು.