ಬೆಂಗಳೂರು: 'ಕಾಂಗ್ರೆಸ್ ಮುಕ್ತ ಭಾರತ' (#CongressMukthBharat) ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, 'ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ' ಎಂದು ತಿಳಿಸಿದೆ.
'ಅಭಿವೃದ್ಧಿ ಮತ್ತು ರಾಷ್ಟ್ರೀಯ ವಿಚಾರಧಾರೆಯ ಪರವಾಗಿ ರಾಷ್ಟ್ರದ ಜನ ನಿಂತಿದ್ದಾರೆ ಎಂಬುದನ್ನು ಈ ಫಲಿತಾಂಶ ಮತ್ತೊಮ್ಮೆ ಸಾಬೀತು ಮಾಡಿದೆ' ಎಂದು ಬಿಜೆಪಿ ಟ್ವೀಟ್ನಲ್ಲಿ ಬರೆದುಕೊಂಡಿದೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ.
— BJP Karnataka (@BJP4Karnataka) March 10, 2022
ಅಭಿವೃದ್ಧಿ ಮತ್ತು ರಾಷ್ಟ್ರೀಯ ವಿಚಾರಧಾರೆಯ ಪರವಾಗಿ ರಾಷ್ಟ್ರದ ಜನ ನಿಂತಿದ್ದಾರೆ ಎಂಬುದನ್ನು ಈ ಫಲಿತಾಂಶ ಮತ್ತೊಮ್ಮೆ ಸಾಬೀತುಮಾಡಿದೆ.#CongressMukthBharat
'ಗೋವಾ ರಾಜ್ಯದ ಫಲಿತಾಂಶ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಅಧಿಕಾರದ ಕನಸು ಕಂಡಿತ್ತು. ಕೂಸು ಹುಟ್ಟುವುದಕ್ಕೆ ಮುನ್ನವೇ ಕುಲಾವಿ ಹೊಲಿಸಲು ಹೋದ ಕಾಂಗ್ರೆಸ್ ಪಕ್ಷಕ್ಕೆ ಗೋವಾದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ಸಿಗರೇ, ಹಗಲು ಕನಸು ಕಾಣುವುದನ್ನು ನಿಲ್ಲಿಸಿ' ಎಂದು ಕರ್ನಾಟಕ ಬಿಜೆಪಿಯು ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಅವರ ಚಿತ್ರದ ಜೊತೆಗೆ ಮತ್ತೊಂದು ಟ್ವೀಟ್ ಮಾಡಿದೆ.
ಗೋವಾ ರಾಜ್ಯದ ಫಲಿತಾಂಶ ಪ್ರಕಟವಾಗುವ ಮುನ್ನವೇ ಕಾಂಗ್ರೆಸ್ ಅಧಿಕಾರದ ಕನಸು ಕಂಡಿತ್ತು.
— BJP Karnataka (@BJP4Karnataka) March 10, 2022
ಕೂಸು ಹುಟ್ಟುವುದಕ್ಕೆ ಮುನ್ನವೇ ಕುಲಾವಿ ಹೊಲಿಸಲು ಹೋದ ಕಾಂಗ್ರೆಸ್ ಪಕ್ಷಕ್ಕೆ ಗೋವಾದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.
ಕಾಂಗ್ರೆಸ್ಸಿಗರೇ, ಹಗಲು ಕನಸು ಕಾಣುವುದನ್ನು ನಿಲ್ಲಿಸಿ.#CongressMukthBharat pic.twitter.com/JovT6XAsGI
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.