<p><strong>ಬೆಂಗಳೂರು</strong>: ‘ಧರ್ಮಸ್ಥಳ ವಿಚಾರದಲ್ಲಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ, ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಹೆಸರಿನಲ್ಲಿ ಶುಕ್ರವಾರದಿಂದ ಒಂದು ವಾರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆ ಎಲ್ಲರಿಗೂ ತಿಳಿದೇ ಇದೆ. ಧರ್ಮಸ್ಥಳದ ವಿರುದ್ಧ ಅಪ್ರಚಾರದ ವಿಚಾರವಾಗಿ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ’ ಎಂದು ಹೇಳಿದರು.</p>.<p>‘ಕಳೆದ ಒಂದು ತಿಂಗಳಿಂದ ಧರ್ಮಸ್ಥಳದ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು. ಈ ವಿಚಾರದಲ್ಲಿ ಸಮಗ್ರ ಮತ್ತು ಪಾರದರ್ಶಕ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೆವು’ ಎಂದರು.</p>.<p>‘ತನಿಖೆ ವಿಚಾರದಲ್ಲಿ ನಾವೂ ಈಗಲೂ ಹಿಂದೆ ಸರಿದಿಲ್ಲ. ಆದರೆ, ತನಿಖೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆದುಕೊಂಡು ಬಂದಿದೆ. ಅಪಪ್ರಚಾರವನ್ನು ತಡೆಯುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಮಾಡಲಿಲ್ಲ’ ಎಂದು ವಿಜಯೇಂದ್ರ ಪ್ರಶ್ನಿಸಿದರು.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದರೆ 24 ಗಂಟೆಗಳಲ್ಲಿ ಎಫ್ಐಆರ್ ದಾಖಲಿಸಿ, ಬಂಧಿಸುತ್ತಾರೆ. 81 ವರ್ಷದವರಾದ ಪೂವಪ್ಪ ಅವರ ಮನೆಗೆ ಹೋಗಿ ಪೊಲೀಸರು ಅವರ ಫೋಟೊ ತೆಗೆಯುತ್ತಾರೆ. ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಅವರು ಕೇಳಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಧರ್ಮಸ್ಥಳ ವಿಚಾರದಲ್ಲಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ, ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಹೆಸರಿನಲ್ಲಿ ಶುಕ್ರವಾರದಿಂದ ಒಂದು ವಾರ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p>.<p>ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆ ಎಲ್ಲರಿಗೂ ತಿಳಿದೇ ಇದೆ. ಧರ್ಮಸ್ಥಳದ ವಿರುದ್ಧ ಅಪ್ರಚಾರದ ವಿಚಾರವಾಗಿ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ’ ಎಂದು ಹೇಳಿದರು.</p>.<p>‘ಕಳೆದ ಒಂದು ತಿಂಗಳಿಂದ ಧರ್ಮಸ್ಥಳದ ವಿಚಾರದಲ್ಲಿ ಯಾವ ಯಾವ ಬೆಳವಣಿಗೆ ಆಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ರಾಜ್ಯ ಸರ್ಕಾರ ಧರ್ಮಸ್ಥಳ ವಿಚಾರದಲ್ಲಿ ತನಿಖೆ ನಡೆಸಬೇಕೆಂದು ಎಸ್ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು. ಈ ವಿಚಾರದಲ್ಲಿ ಸಮಗ್ರ ಮತ್ತು ಪಾರದರ್ಶಕ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೆವು’ ಎಂದರು.</p>.<p>‘ತನಿಖೆ ವಿಚಾರದಲ್ಲಿ ನಾವೂ ಈಗಲೂ ಹಿಂದೆ ಸರಿದಿಲ್ಲ. ಆದರೆ, ತನಿಖೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆದುಕೊಂಡು ಬಂದಿದೆ. ಅಪಪ್ರಚಾರವನ್ನು ತಡೆಯುವ ಕೆಲಸವನ್ನು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಏಕೆ ಮಾಡಲಿಲ್ಲ’ ಎಂದು ವಿಜಯೇಂದ್ರ ಪ್ರಶ್ನಿಸಿದರು.</p>.<p>‘ಕಾನೂನು ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದರೆ 24 ಗಂಟೆಗಳಲ್ಲಿ ಎಫ್ಐಆರ್ ದಾಖಲಿಸಿ, ಬಂಧಿಸುತ್ತಾರೆ. 81 ವರ್ಷದವರಾದ ಪೂವಪ್ಪ ಅವರ ಮನೆಗೆ ಹೋಗಿ ಪೊಲೀಸರು ಅವರ ಫೋಟೊ ತೆಗೆಯುತ್ತಾರೆ. ಧರ್ಮಸ್ಥಳದ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಅವರು ಕೇಳಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>