<p><strong>ಬೆಂಗಳೂರು:</strong> ‘ನ್ಯಾಯಮೂರ್ತಿ ನಾಗಮೋಹನ್ದಾಸ್ ಆಯೋಗದ ವರದಿ ಮೂಲಕ ಒಳ ಮೀಸಲಾತಿ ವಿಚಾರದಲ್ಲಿ ಗೊಂದಲು ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮಾದಿಗರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಬಿಜೆಪಿಯ ಎ.ನಾರಾಯಣಸ್ವಾಮಿ ಆರೋಪಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳಮೀಸಲಾತಿ ಜಾರಿಯನ್ನು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಾರಿಯ ಅಧಿವೇಶನ ಮುಗಿಯುವ ಒಳಗೆ ಒಳ ಮೀಸಲಾತಿ ಜಾರಿ ಮಾಡದೇ ಇದ್ದಲ್ಲಿ, ಕಾಂಗ್ರೆಸ್ ಸರ್ಕಾರದ ಮೇಲಿನ ಈ ಅಪನಂಬಿಕೆ ಮತ್ತಷ್ಟು ಗಟ್ಟಿಯಾಗಲಿದೆ’ ಎಂದರು.</p>.<p>‘ಮಾದಿಗ ಸಮುದಾಯದ ಸಂಘಟನೆಗಳು, ಜನರು, ಉದ್ಯಮಿಗಳು, ವಿದ್ಯಾರ್ಥಿಗಳನ್ನು ಒಳಗೊಂಡು ಸಭೆ ನಡೆಸಲಾಗಿದೆ. ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚಿಸಲಾಗಿದೆ. ಎಲ್ಲರೂ ಒಳಗೊಂಡು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಆಗಸ್ಟ್ 1ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸುತ್ತೇವೆ’ ಎಂದರು.</p>.<p>‘ಮಾದಿಗರು ಹೋರಾಟ ನಡೆಸುವ ಅವಶ್ಯಕತೆ ಇಲ್ಲ ಎಂದು ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ ಅವರು ಹಾದಿತಪ್ಪಿಸುವಂತಹ ಮಾತುಗಳನ್ನಾಡುತ್ತಿದ್ದಾರೆ. ಅವರ ಮಾತುಗಳನ್ನು ನಂಬಬಾರದು. ಸಮುದಾಯದ ನಾಯಕರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋರಾಟವನ್ನು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನ್ಯಾಯಮೂರ್ತಿ ನಾಗಮೋಹನ್ದಾಸ್ ಆಯೋಗದ ವರದಿ ಮೂಲಕ ಒಳ ಮೀಸಲಾತಿ ವಿಚಾರದಲ್ಲಿ ಗೊಂದಲು ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮಾದಿಗರಿಗೆ ಅನ್ಯಾಯ ಮಾಡುತ್ತಿದೆ’ ಎಂದು ಬಿಜೆಪಿಯ ಎ.ನಾರಾಯಣಸ್ವಾಮಿ ಆರೋಪಿಸಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳಮೀಸಲಾತಿ ಜಾರಿಯನ್ನು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಈ ಬಾರಿಯ ಅಧಿವೇಶನ ಮುಗಿಯುವ ಒಳಗೆ ಒಳ ಮೀಸಲಾತಿ ಜಾರಿ ಮಾಡದೇ ಇದ್ದಲ್ಲಿ, ಕಾಂಗ್ರೆಸ್ ಸರ್ಕಾರದ ಮೇಲಿನ ಈ ಅಪನಂಬಿಕೆ ಮತ್ತಷ್ಟು ಗಟ್ಟಿಯಾಗಲಿದೆ’ ಎಂದರು.</p>.<p>‘ಮಾದಿಗ ಸಮುದಾಯದ ಸಂಘಟನೆಗಳು, ಜನರು, ಉದ್ಯಮಿಗಳು, ವಿದ್ಯಾರ್ಥಿಗಳನ್ನು ಒಳಗೊಂಡು ಸಭೆ ನಡೆಸಲಾಗಿದೆ. ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚಿಸಲಾಗಿದೆ. ಎಲ್ಲರೂ ಒಳಗೊಂಡು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಆಗಸ್ಟ್ 1ರಂದು ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸುತ್ತೇವೆ’ ಎಂದರು.</p>.<p>‘ಮಾದಿಗರು ಹೋರಾಟ ನಡೆಸುವ ಅವಶ್ಯಕತೆ ಇಲ್ಲ ಎಂದು ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ ಅವರು ಹಾದಿತಪ್ಪಿಸುವಂತಹ ಮಾತುಗಳನ್ನಾಡುತ್ತಿದ್ದಾರೆ. ಅವರ ಮಾತುಗಳನ್ನು ನಂಬಬಾರದು. ಸಮುದಾಯದ ನಾಯಕರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೋರಾಟವನ್ನು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>