<p><strong>ಬೆಂಗಳೂರು: </strong>ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿರುವ ಬಿಜೆಪಿ ಮುಖಂಡ ಬಿ.ಜೆ. ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಆಯ್ಕೆಯಾಗಿದ್ದು, ಮೇ 15ರಂದು ಪಟ್ಟಾಭಿಷೇಕ ನೆರವೇರಲಿದೆ.</p>.<p>ಮಾಜಿ ಸಚಿವರೂ ಆಗಿರುವ ಪುಟ್ಟಸ್ವಾಮಿ, ಮಠಾಧಿಪತಿಯಾಗುವ ನಿರ್ಧಾರ ಕೈಗೊಂಡಿದ್ದಾರೆ. ಮೇ 6ರಂದು ದೀಕ್ಷೆ ಪಡೆಯಲಿದ್ದು, 15ಕ್ಕೆ ಪಟ್ಟಾಭಿಷೇಕ ಸಮಾರಂಭ ನಿಗದಿಯಾಗಿದೆ. ಮಾದನಾಯಕನಹಳ್ಳಿಯಲ್ಲಿರುವ ಮಠವನ್ನು ಸ್ವರ್ಣಾನಂದ ಪುರಿ ಸ್ವಾಮೀಜಿ ಎಂಬ ಹೆಸರಿನೊಂದಿಗೆ ಅವರು ಮುನ್ನಡೆಸಲಿದ್ದಾರೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರಿಗೆ ಪುಟ್ಟಸ್ವಾಮಿ ಖುದ್ದಾಗಿ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ.</p>.<p>‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನ ಪ್ರಯತ್ನದಿಂದ 8 ಎಕರೆ ಜಮೀನು ಹಾಗೂ ₹ 5 ಕೋಟಿ ಅನುದಾನವನ್ನು ಗಾಣಿಗ ಸಮುದಾಯದ ಮಠಕ್ಕೆ ಮಂಜೂರು ಮಾಡಿದ್ದರು. 2016ರಲ್ಲೇ ಮಠದ ಉದ್ಘಾಟನೆಯಾಗಿದೆ. ಪೀಠಾಧಿಪತಿಯನ್ನಾಗಿ ಮಾಡಲು ಮೂವರು ಯುವಕರನ್ನು ತರಬೇತಿಗೆ ಕಳುಹಿಸಲಾಗಿತ್ತು. ಆದರೆ, ಆ ಪ್ರಯತ್ನ ಫಲ ನೀಡಿರಲಿಲ್ಲ’ ಎಂದು ಪುಟ್ಟಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ರಾಜರಾಜೇಶ್ವರಿ ನಗರದ ಜಯೇಂದ್ರ ಪುರಿ ಸ್ವಾಮೀಜಿ ಬಳಿ ಒಬ್ಬ ಯುವಕನನ್ನು ತರಬೇತಿಗೆ ನಿಯೋಜಿಸಲಾಗಿತ್ತು. ಅಲ್ಲಿ ಇತ್ತೀಚೆಗೆ ನಡೆದ ಯಾಗವೊಂದರಲ್ಲಿ ಭಾಗಿಯಾಗಿದ್ದೆ. ನೀವೇ ಮೊದಲ ಪೀಠಾಧಿಪತಿಯಾಗಬೇಕೆಂದು ದೇವಿಯ ಅನುಗ್ರಹವಾಗಿದೆ ಎಂದು ಸೂಚಿಸಿದರು. ಅವರ ಆದೇಶದಂತೆ ಮೊದಲ ಪೀಠಾಧಿಪತಿಯಾಗಲು ಒಪ್ಪಿಕೊಂಡಿದ್ದೇನೆ’ ಎಂದರು.</p>.<p>‘ಸಮುದಾಯದ ಮುಖಂಡರ ಜತೆ ಎರಡು ಬಾರಿ ಸಭೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಕುಟುಂಬದವರಿಗೂ ತಿಳಿಸಲಾಗಿದೆ. ಯೋಜನಾ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿ ರಾಜೀನಾಮೆ ನೀಡುವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿರುವ ಬಿಜೆಪಿ ಮುಖಂಡ ಬಿ.ಜೆ. ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಆಯ್ಕೆಯಾಗಿದ್ದು, ಮೇ 15ರಂದು ಪಟ್ಟಾಭಿಷೇಕ ನೆರವೇರಲಿದೆ.</p>.<p>ಮಾಜಿ ಸಚಿವರೂ ಆಗಿರುವ ಪುಟ್ಟಸ್ವಾಮಿ, ಮಠಾಧಿಪತಿಯಾಗುವ ನಿರ್ಧಾರ ಕೈಗೊಂಡಿದ್ದಾರೆ. ಮೇ 6ರಂದು ದೀಕ್ಷೆ ಪಡೆಯಲಿದ್ದು, 15ಕ್ಕೆ ಪಟ್ಟಾಭಿಷೇಕ ಸಮಾರಂಭ ನಿಗದಿಯಾಗಿದೆ. ಮಾದನಾಯಕನಹಳ್ಳಿಯಲ್ಲಿರುವ ಮಠವನ್ನು ಸ್ವರ್ಣಾನಂದ ಪುರಿ ಸ್ವಾಮೀಜಿ ಎಂಬ ಹೆಸರಿನೊಂದಿಗೆ ಅವರು ಮುನ್ನಡೆಸಲಿದ್ದಾರೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಿ.ಎಸ್. ಯಡಿಯೂರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರಿಗೆ ಪುಟ್ಟಸ್ವಾಮಿ ಖುದ್ದಾಗಿ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ.</p>.<p>‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನನ್ನ ಪ್ರಯತ್ನದಿಂದ 8 ಎಕರೆ ಜಮೀನು ಹಾಗೂ ₹ 5 ಕೋಟಿ ಅನುದಾನವನ್ನು ಗಾಣಿಗ ಸಮುದಾಯದ ಮಠಕ್ಕೆ ಮಂಜೂರು ಮಾಡಿದ್ದರು. 2016ರಲ್ಲೇ ಮಠದ ಉದ್ಘಾಟನೆಯಾಗಿದೆ. ಪೀಠಾಧಿಪತಿಯನ್ನಾಗಿ ಮಾಡಲು ಮೂವರು ಯುವಕರನ್ನು ತರಬೇತಿಗೆ ಕಳುಹಿಸಲಾಗಿತ್ತು. ಆದರೆ, ಆ ಪ್ರಯತ್ನ ಫಲ ನೀಡಿರಲಿಲ್ಲ’ ಎಂದು ಪುಟ್ಟಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ರಾಜರಾಜೇಶ್ವರಿ ನಗರದ ಜಯೇಂದ್ರ ಪುರಿ ಸ್ವಾಮೀಜಿ ಬಳಿ ಒಬ್ಬ ಯುವಕನನ್ನು ತರಬೇತಿಗೆ ನಿಯೋಜಿಸಲಾಗಿತ್ತು. ಅಲ್ಲಿ ಇತ್ತೀಚೆಗೆ ನಡೆದ ಯಾಗವೊಂದರಲ್ಲಿ ಭಾಗಿಯಾಗಿದ್ದೆ. ನೀವೇ ಮೊದಲ ಪೀಠಾಧಿಪತಿಯಾಗಬೇಕೆಂದು ದೇವಿಯ ಅನುಗ್ರಹವಾಗಿದೆ ಎಂದು ಸೂಚಿಸಿದರು. ಅವರ ಆದೇಶದಂತೆ ಮೊದಲ ಪೀಠಾಧಿಪತಿಯಾಗಲು ಒಪ್ಪಿಕೊಂಡಿದ್ದೇನೆ’ ಎಂದರು.</p>.<p>‘ಸಮುದಾಯದ ಮುಖಂಡರ ಜತೆ ಎರಡು ಬಾರಿ ಸಭೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಕುಟುಂಬದವರಿಗೂ ತಿಳಿಸಲಾಗಿದೆ. ಯೋಜನಾ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿ ರಾಜೀನಾಮೆ ನೀಡುವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>