<p><strong>ಬೆಂಗಳೂರು: </strong>ಖಾಸಗಿ ವಾಹಿನಿಯೊಂದು ನಡೆಸುವ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸಿರುವ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ವಿಶೇಷ ಆಹ್ವಾನ ನೀಡಿದರೆ ಮೂರು–ನಾಲ್ಕು ದಿನಗಳ ಮಟ್ಟಿಗೆ ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.</p>.<p>ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಗ್ಬಾಸ್ ಕಾರ್ಯಕ್ರಮಕ್ಕೆ ಹೋದರೆ ರಾಜಕಾರಣದಲ್ಲಿ ಕಿಡಿ ಹೊತ್ತುವಂತೆ ಮಾಡುತ್ತೇನೆ. ಆ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತನನ್ನಾಗಿ ಮಾಡಿದರೆ ಖಂಡಿತಾ ಹೋಗುತ್ತೇನೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ನಿರೂಪಕರು 6ನೇ ಸೀಸನ್ಗೆ ಆಹ್ವಾನಿಸಿದ್ದರು. ಆಗ ನನಗ ಆರೋಗ್ಯ ಸರಿ ಇಲ್ಲದ ಕಾರಣ ಭಾಗವಹಿಸಲು ಆಗಿರಲಿಲ್ಲ. ಈಗ ಸಿದ್ಧನಿದ್ದೇನೆ. ರಾಜಕಾರಣ ಬಗ್ಗೆ ಶಿಕ್ಷಣ ನೀಡುತ್ತೇನೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಪ್ತರು ಸಲಹೆ ನೀಡಿದ್ದಾರೆ. ವೇದಿಕೆಯನ್ನು ಕ್ರಿಯಾಶೀಲವಾಗಿ ಬಳಸಿಕೊಳ್ಳುವ ಆದೆ ಇದೆ ಎಂದರು.</p>.<p>ಚುನಾವಣೆಗಳು ಹತ್ತಿರ ಬರುತ್ತಿರುವುದರಿಂದ ಅದರಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಹೀಗಾಗಿ ಹೆಚ್ಚು ದಿನಗಳನ್ನು ಬಿಗ್ಬಾಸ್ನಲ್ಲಿ ಕಳೆಯಲು ಸಾಧ್ಯವಿಲ್ಲ ಎಂದೂ ವಿಶ್ವನಾಥ್ ಹೇಳಿದರು.</p>.<p>ಧರ್ಮೇಗೌಡ ಅವರ ನಿಧನದಿಂದ ಖಾಲಿ ಇರುವ ಸ್ಥಾನಕ್ಕೆ ನನಗೆ ಅವಕಾಶ ನೀಡುವಂತೆ ಕೋರಿಕೆ ಸಲ್ಲಿಸಿದ್ದೇನೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೂ ತಂದಿದ್ದೇನೆ. ಸುಪ್ರೀಂಕೋರ್ಟ್ನ ಶಾಪದಿಂದ ವಿಮೋಚನೆ ಆಗಲು ಇದೊಂದು ಅವಕಾಶ ನೀಡಬೇಕು. ಚುನಾವಣೆ ಮೂಲಕ ಆಯ್ಕೆಗೆ ಇದೊಂದು ಅವಕಾಶವಿದೆ ಎಂದು ತಿಳಿಸಿದರು.</p>.<p>ಸರ್ಕಾರದಲ್ಲಿ ಯಾವುದೇ ಜವಾಬ್ದಾರಿಯನ್ನು ನೀಡಿದರೂ ಸಮರ್ಥವಾಗಿ ನಿಭಾಯಿಸಬಲ್ಲೆ. ನನಗೆ ಕನಿಷ್ಠ ಮೂರುವರೆ ವರ್ಷ ಅವಕಾಶ ನೀಡಬೇಕು. ಆಗಿರುವ ವ್ಯತ್ಯಾಸವನ್ನು ಸರಿಪಡಿಸಬೇಕು ಎಂದು ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಖಾಸಗಿ ವಾಹಿನಿಯೊಂದು ನಡೆಸುವ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸಿರುವ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು, ವಿಶೇಷ ಆಹ್ವಾನ ನೀಡಿದರೆ ಮೂರು–ನಾಲ್ಕು ದಿನಗಳ ಮಟ್ಟಿಗೆ ಆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.</p>.<p>ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಿಗ್ಬಾಸ್ ಕಾರ್ಯಕ್ರಮಕ್ಕೆ ಹೋದರೆ ರಾಜಕಾರಣದಲ್ಲಿ ಕಿಡಿ ಹೊತ್ತುವಂತೆ ಮಾಡುತ್ತೇನೆ. ಆ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತನನ್ನಾಗಿ ಮಾಡಿದರೆ ಖಂಡಿತಾ ಹೋಗುತ್ತೇನೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ನಿರೂಪಕರು 6ನೇ ಸೀಸನ್ಗೆ ಆಹ್ವಾನಿಸಿದ್ದರು. ಆಗ ನನಗ ಆರೋಗ್ಯ ಸರಿ ಇಲ್ಲದ ಕಾರಣ ಭಾಗವಹಿಸಲು ಆಗಿರಲಿಲ್ಲ. ಈಗ ಸಿದ್ಧನಿದ್ದೇನೆ. ರಾಜಕಾರಣ ಬಗ್ಗೆ ಶಿಕ್ಷಣ ನೀಡುತ್ತೇನೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಪ್ತರು ಸಲಹೆ ನೀಡಿದ್ದಾರೆ. ವೇದಿಕೆಯನ್ನು ಕ್ರಿಯಾಶೀಲವಾಗಿ ಬಳಸಿಕೊಳ್ಳುವ ಆದೆ ಇದೆ ಎಂದರು.</p>.<p>ಚುನಾವಣೆಗಳು ಹತ್ತಿರ ಬರುತ್ತಿರುವುದರಿಂದ ಅದರಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಹೀಗಾಗಿ ಹೆಚ್ಚು ದಿನಗಳನ್ನು ಬಿಗ್ಬಾಸ್ನಲ್ಲಿ ಕಳೆಯಲು ಸಾಧ್ಯವಿಲ್ಲ ಎಂದೂ ವಿಶ್ವನಾಥ್ ಹೇಳಿದರು.</p>.<p>ಧರ್ಮೇಗೌಡ ಅವರ ನಿಧನದಿಂದ ಖಾಲಿ ಇರುವ ಸ್ಥಾನಕ್ಕೆ ನನಗೆ ಅವಕಾಶ ನೀಡುವಂತೆ ಕೋರಿಕೆ ಸಲ್ಲಿಸಿದ್ದೇನೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೂ ತಂದಿದ್ದೇನೆ. ಸುಪ್ರೀಂಕೋರ್ಟ್ನ ಶಾಪದಿಂದ ವಿಮೋಚನೆ ಆಗಲು ಇದೊಂದು ಅವಕಾಶ ನೀಡಬೇಕು. ಚುನಾವಣೆ ಮೂಲಕ ಆಯ್ಕೆಗೆ ಇದೊಂದು ಅವಕಾಶವಿದೆ ಎಂದು ತಿಳಿಸಿದರು.</p>.<p>ಸರ್ಕಾರದಲ್ಲಿ ಯಾವುದೇ ಜವಾಬ್ದಾರಿಯನ್ನು ನೀಡಿದರೂ ಸಮರ್ಥವಾಗಿ ನಿಭಾಯಿಸಬಲ್ಲೆ. ನನಗೆ ಕನಿಷ್ಠ ಮೂರುವರೆ ವರ್ಷ ಅವಕಾಶ ನೀಡಬೇಕು. ಆಗಿರುವ ವ್ಯತ್ಯಾಸವನ್ನು ಸರಿಪಡಿಸಬೇಕು ಎಂದು ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>