<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಕಾರಿನಲ್ಲಿ ವಿಧಾನಸೌಧಕ್ಕೆ ಬುಧವಾರ ಬಂದಿದ್ದು ಗಮನ ಸೆಳೆಯಿತು.</p>.<p>ಗಂಭೀರ ವಿಚಾರವೊಂದರ ಕುರಿತು ಮನವಿ ಸಲ್ಲಿಸಲು ರವಿಕುಮಾರ್ ಅವರು ಮುಖ್ಯಮಂತ್ರಿಯ ನಿವಾಸ ‘ಕಾವೇರಿ’ಗೆ ತೆರಳಿದ್ದರು. ಅಲ್ಲಿಂದ ಮುಖ್ಯಮಂತ್ರಿಯ ಆಹ್ವಾನದ ಮೇರೆಗೆ ಜೊತೆಗೆ ಕಾರಿನಲ್ಲಿ ವಿಧಾನಸೌಧಕ್ಕೆ ತೆರಳಿ ವಿವರ ನೀಡಿದ್ದಾರೆ ಎಂದು ಗೊತ್ತಾಗಿದೆ.</p>.<p>ರಾಜ್ಯದಲ್ಲಿ 30ಕ್ಕೂ ಹೆಚ್ಚು ಮಕ್ಕಳು ಮತ್ತು ಯುವಕರು ಅತಿ ವಿರಳವಾದ ‘ಗುಚೇರ್ಸ್’ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದರ ಚಿಕಿತ್ಸೆಗೆಂದು ಮಾಸಿಕ ಲಕ್ಷಾಂತರ ಹಣ ವೆಚ್ಚವಾಗುತ್ತಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಹಾಗೂ ಕಾಯಂ ಆಗಿ ಅನುದಾನ ಮೀಸಲಿಡುವಂತೆ ಮನವಿ ಸಲ್ಲಿಸಲು ರವಿಕುಮಾರ್ ಅವರು ಬುಧವಾರ ಸಂಜೆ 3.50ರ ವೇಳೆಗೆ ಮುಖ್ಯಮಂತ್ರಿಯ ನಿವಾಸಕ್ಕೆ ತೆರಳಿದ್ದರು.</p>.<p>ಆಗ ಮುಖ್ಯಮಂತ್ರಿ, ಮಾತನಾಡೋಣ ಬನ್ನಿ ಎಂದು ಆಹ್ವಾನಿಸಿದ ಕಾರಣಕ್ಕೆ ವಿಧಾನಸೌಧದವರೆಗೆ ಮುಖ್ಯಮಂತ್ರಿಯ ಕಾರಿನಲ್ಲೇ ರವಿಕುಮಾರ್ ಅವರು ಪ್ರಯಾಣಿಸಿ ಸಮಸ್ಯೆ ಬಗ್ಗೆ ವಿವರಿಸಿದರು ಎಂದು ಗೊತ್ತಾಗಿದೆ.</p>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಕಾರಿನಲ್ಲಿ ವಿಧಾನಸೌಧಕ್ಕೆ ಬುಧವಾರ ಬಂದಿದ್ದು ಗಮನ ಸೆಳೆಯಿತು.</p>.<p>ಗಂಭೀರ ವಿಚಾರವೊಂದರ ಕುರಿತು ಮನವಿ ಸಲ್ಲಿಸಲು ರವಿಕುಮಾರ್ ಅವರು ಮುಖ್ಯಮಂತ್ರಿಯ ನಿವಾಸ ‘ಕಾವೇರಿ’ಗೆ ತೆರಳಿದ್ದರು. ಅಲ್ಲಿಂದ ಮುಖ್ಯಮಂತ್ರಿಯ ಆಹ್ವಾನದ ಮೇರೆಗೆ ಜೊತೆಗೆ ಕಾರಿನಲ್ಲಿ ವಿಧಾನಸೌಧಕ್ಕೆ ತೆರಳಿ ವಿವರ ನೀಡಿದ್ದಾರೆ ಎಂದು ಗೊತ್ತಾಗಿದೆ.</p>.<p>ರಾಜ್ಯದಲ್ಲಿ 30ಕ್ಕೂ ಹೆಚ್ಚು ಮಕ್ಕಳು ಮತ್ತು ಯುವಕರು ಅತಿ ವಿರಳವಾದ ‘ಗುಚೇರ್ಸ್’ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದರ ಚಿಕಿತ್ಸೆಗೆಂದು ಮಾಸಿಕ ಲಕ್ಷಾಂತರ ಹಣ ವೆಚ್ಚವಾಗುತ್ತಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಹಾಗೂ ಕಾಯಂ ಆಗಿ ಅನುದಾನ ಮೀಸಲಿಡುವಂತೆ ಮನವಿ ಸಲ್ಲಿಸಲು ರವಿಕುಮಾರ್ ಅವರು ಬುಧವಾರ ಸಂಜೆ 3.50ರ ವೇಳೆಗೆ ಮುಖ್ಯಮಂತ್ರಿಯ ನಿವಾಸಕ್ಕೆ ತೆರಳಿದ್ದರು.</p>.<p>ಆಗ ಮುಖ್ಯಮಂತ್ರಿ, ಮಾತನಾಡೋಣ ಬನ್ನಿ ಎಂದು ಆಹ್ವಾನಿಸಿದ ಕಾರಣಕ್ಕೆ ವಿಧಾನಸೌಧದವರೆಗೆ ಮುಖ್ಯಮಂತ್ರಿಯ ಕಾರಿನಲ್ಲೇ ರವಿಕುಮಾರ್ ಅವರು ಪ್ರಯಾಣಿಸಿ ಸಮಸ್ಯೆ ಬಗ್ಗೆ ವಿವರಿಸಿದರು ಎಂದು ಗೊತ್ತಾಗಿದೆ.</p>