<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಕಾರಿನಲ್ಲಿ ವಿಧಾನಸೌಧಕ್ಕೆ ಬುಧವಾರ ಬಂದಿದ್ದು ಗಮನ ಸೆಳೆಯಿತು.</p>.<p>ಗಂಭೀರ ವಿಚಾರವೊಂದರ ಕುರಿತು ಮನವಿ ಸಲ್ಲಿಸಲು ರವಿಕುಮಾರ್ ಅವರು ಮುಖ್ಯಮಂತ್ರಿಯ ನಿವಾಸ ‘ಕಾವೇರಿ’ಗೆ ತೆರಳಿದ್ದರು. ಅಲ್ಲಿಂದ ಮುಖ್ಯಮಂತ್ರಿಯ ಆಹ್ವಾನದ ಮೇರೆಗೆ ಜೊತೆಗೆ ಕಾರಿನಲ್ಲಿ ವಿಧಾನಸೌಧಕ್ಕೆ ತೆರಳಿ ವಿವರ ನೀಡಿದ್ದಾರೆ ಎಂದು ಗೊತ್ತಾಗಿದೆ.</p>.<p>ರಾಜ್ಯದಲ್ಲಿ 30ಕ್ಕೂ ಹೆಚ್ಚು ಮಕ್ಕಳು ಮತ್ತು ಯುವಕರು ಅತಿ ವಿರಳವಾದ ‘ಗುಚೇರ್ಸ್’ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದರ ಚಿಕಿತ್ಸೆಗೆಂದು ಮಾಸಿಕ ಲಕ್ಷಾಂತರ ಹಣ ವೆಚ್ಚವಾಗುತ್ತಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಹಾಗೂ ಕಾಯಂ ಆಗಿ ಅನುದಾನ ಮೀಸಲಿಡುವಂತೆ ಮನವಿ ಸಲ್ಲಿಸಲು ರವಿಕುಮಾರ್ ಅವರು ಬುಧವಾರ ಸಂಜೆ 3.50ರ ವೇಳೆಗೆ ಮುಖ್ಯಮಂತ್ರಿಯ ನಿವಾಸಕ್ಕೆ ತೆರಳಿದ್ದರು.</p>.<p>ಆಗ ಮುಖ್ಯಮಂತ್ರಿ, ಮಾತನಾಡೋಣ ಬನ್ನಿ ಎಂದು ಆಹ್ವಾನಿಸಿದ ಕಾರಣಕ್ಕೆ ವಿಧಾನಸೌಧದವರೆಗೆ ಮುಖ್ಯಮಂತ್ರಿಯ ಕಾರಿನಲ್ಲೇ ರವಿಕುಮಾರ್ ಅವರು ಪ್ರಯಾಣಿಸಿ ಸಮಸ್ಯೆ ಬಗ್ಗೆ ವಿವರಿಸಿದರು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಕಾರಿನಲ್ಲಿ ವಿಧಾನಸೌಧಕ್ಕೆ ಬುಧವಾರ ಬಂದಿದ್ದು ಗಮನ ಸೆಳೆಯಿತು.</p>.<p>ಗಂಭೀರ ವಿಚಾರವೊಂದರ ಕುರಿತು ಮನವಿ ಸಲ್ಲಿಸಲು ರವಿಕುಮಾರ್ ಅವರು ಮುಖ್ಯಮಂತ್ರಿಯ ನಿವಾಸ ‘ಕಾವೇರಿ’ಗೆ ತೆರಳಿದ್ದರು. ಅಲ್ಲಿಂದ ಮುಖ್ಯಮಂತ್ರಿಯ ಆಹ್ವಾನದ ಮೇರೆಗೆ ಜೊತೆಗೆ ಕಾರಿನಲ್ಲಿ ವಿಧಾನಸೌಧಕ್ಕೆ ತೆರಳಿ ವಿವರ ನೀಡಿದ್ದಾರೆ ಎಂದು ಗೊತ್ತಾಗಿದೆ.</p>.<p>ರಾಜ್ಯದಲ್ಲಿ 30ಕ್ಕೂ ಹೆಚ್ಚು ಮಕ್ಕಳು ಮತ್ತು ಯುವಕರು ಅತಿ ವಿರಳವಾದ ‘ಗುಚೇರ್ಸ್’ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದರ ಚಿಕಿತ್ಸೆಗೆಂದು ಮಾಸಿಕ ಲಕ್ಷಾಂತರ ಹಣ ವೆಚ್ಚವಾಗುತ್ತಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಹಾಗೂ ಕಾಯಂ ಆಗಿ ಅನುದಾನ ಮೀಸಲಿಡುವಂತೆ ಮನವಿ ಸಲ್ಲಿಸಲು ರವಿಕುಮಾರ್ ಅವರು ಬುಧವಾರ ಸಂಜೆ 3.50ರ ವೇಳೆಗೆ ಮುಖ್ಯಮಂತ್ರಿಯ ನಿವಾಸಕ್ಕೆ ತೆರಳಿದ್ದರು.</p>.<p>ಆಗ ಮುಖ್ಯಮಂತ್ರಿ, ಮಾತನಾಡೋಣ ಬನ್ನಿ ಎಂದು ಆಹ್ವಾನಿಸಿದ ಕಾರಣಕ್ಕೆ ವಿಧಾನಸೌಧದವರೆಗೆ ಮುಖ್ಯಮಂತ್ರಿಯ ಕಾರಿನಲ್ಲೇ ರವಿಕುಮಾರ್ ಅವರು ಪ್ರಯಾಣಿಸಿ ಸಮಸ್ಯೆ ಬಗ್ಗೆ ವಿವರಿಸಿದರು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>