<p><strong>ಬೆಂಗಳೂರು</strong>: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಶೇ 80 ರಷ್ಟು ಕಮಿಷನ್ ಪಡೆಯುತ್ತಿರುವುದು ಈಗ ಸಾಬೀತಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.</p>.<p>‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಸರ್ಕಾರವನ್ನು ಶೇ 40 ಕಮಿಷನ್ ಸರ್ಕಾರ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘವೇ, ಕಾಂಗ್ರೆಸ್ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ಹೇಳಿ ಮುಖ್ಯಮಂತ್ರಿಯವರಿಗೇ ಪತ್ರ ಬರೆದಿದೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಸರ್ಕಾರಕ್ಕೆ ಮಾನ– ಮರ್ಯಾದೆ ಇದ್ದರೆ ಕೂಡಲೇ ಸರ್ಕಾರದಲ್ಲಿರುವ ಎಲ್ಲರೂ ರಾಜೀನಾಮೆ ನೀಡಬೇಕು. ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ’ ಎಂದಿದ್ದಾರೆ.</p>.<p>‘ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿಯನ್ನು ಸರ್ಕಾರ ದಿಢೀರ್ ಎಂದು ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ‘ಪೇಸಿಎಂ’ ಎಂಬ ಪೋಸ್ಟರ್ ಅಂಟಿಸಿ ಗುಲ್ಲೆಬ್ಬಿಸಿದ್ದರು. ಶೇ 80 ರಷ್ಟು ಕಮಿಷನ್ ಬಗ್ಗೆ ರಾಹುಲ್ಗಾಂಧಿ ಉತ್ತರ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p><strong>‘ದುಪ್ಪಟ್ಟು ಕಮಿಷನ್ ಫಾರ್ಮುಲಾ ಯಾವುದು?’</strong></p><p>‘ದುಪ್ಪಟ್ಟು ಕಮಿಷನ್ಗೆ ಕಾರಣವಾಗಿರುವ ಫಾರ್ಮುಲಾ ಯಾವುದು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.</p><p>ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು‘ಜ್ಯೇಷ್ಠತೆ ಮತ್ತು ಪಾರದರ್ಶಕತೆಯನ್ನು ಮೀರಿ ಸ್ಪೆಷಲ್ ಫಾರ್ಮುಲಾ ಮೂಲಕ 15 ರಿಂದ 20 ರಷ್ಟು ಗುತ್ತಿಗೆದಾರರಿಗೆ ಮಾತ್ರ ಎಲ್ಒಸಿ ಬಿಡುಗಡೆ ಆಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರ ಸಂಘ ನಿಮ್ಮ ಆಪ್ತ ಸಚಿವರ ಇಲಾಖೆಗಳಲ್ಲೇ ಈ ರೀತಿ ವ್ಯವಸ್ಥೆ ಇದೆ ಎಂದು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದಲ್ಲಿ ದೂರಿದೆ. ಹಾಗಾದರೆ ಈ ಸ್ಪೆಷಲ್ ಫಾರ್ಮುಲಾ ವ್ಯವಸ್ಥೆ ಇರುವುದು ನಿಮ್ಮ ಗಮನಕ್ಕೂ ಇದೆ ಎಂದೇ ಅರ್ಥವಲ್ಲವೇ? ಗೊತ್ತಿದ್ದೂ ಸುಮ್ಮನಿರುವುದು ಎಂದರೆ ಅರ್ಥವೇನು?’ ಎಂದು ಅವರು ಕೇಳಿದ್ದಾರೆ.</p><p>‘ಮಠದೊಳಗಿನ ಬೆಕ್ಕು ಇಲಿಯ ಕಂಡೊಡನೆ ಪುಟನೆಗೆದಂತೆ ಕಾಣ ಎಂಬಂತಾಗಿದೆ ನಿಮ್ಮ ಸ್ಥಿತಿ. ನಿಮ್ಮದೀಗ 50–50 ಅವಧಿಯ ಶೇ 80ರ ಸರ್ಕಾರ’ ಎಂದು ಅವರು ವ್ಯಂಗ್ಯ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಶೇ 80 ರಷ್ಟು ಕಮಿಷನ್ ಪಡೆಯುತ್ತಿರುವುದು ಈಗ ಸಾಬೀತಾಗಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.</p>.<p>‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಸರ್ಕಾರವನ್ನು ಶೇ 40 ಕಮಿಷನ್ ಸರ್ಕಾರ ಎಂದು ಸುಳ್ಳು ಆರೋಪ ಮಾಡಿದ್ದರು. ಈಗ ಗುತ್ತಿಗೆದಾರರ ಸಂಘವೇ, ಕಾಂಗ್ರೆಸ್ ದುಪ್ಪಟ್ಟು ಕಮಿಷನ್ ಪಡೆಯುತ್ತಿದೆ ಎಂದು ಹೇಳಿ ಮುಖ್ಯಮಂತ್ರಿಯವರಿಗೇ ಪತ್ರ ಬರೆದಿದೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಸರ್ಕಾರಕ್ಕೆ ಮಾನ– ಮರ್ಯಾದೆ ಇದ್ದರೆ ಕೂಡಲೇ ಸರ್ಕಾರದಲ್ಲಿರುವ ಎಲ್ಲರೂ ರಾಜೀನಾಮೆ ನೀಡಬೇಕು. ಸಚಿವರು ಲಂಚ ಪಡೆದಿಲ್ಲ ಎಂದಾದರೆ ಸ್ಪಷ್ಟನೆ ನೀಡಲಿ. ಇಲ್ಲವೆಂದರೆ ಎಲ್ಲರೂ ಲಂಚ ಪಡೆದಿದ್ದಾರೆ ಎಂದು ತಿಳಿಯಬೇಕಾಗುತ್ತದೆ’ ಎಂದಿದ್ದಾರೆ.</p>.<p>‘ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿಯನ್ನು ಸರ್ಕಾರ ದಿಢೀರ್ ಎಂದು ರದ್ದು ಮಾಡಿದೆ. ಭ್ರಷ್ಟಾಚಾರ ಬಯಲಾಗುತ್ತದೆ ಎಂಬ ಕಾರಣಕ್ಕೆ ಈ ಕ್ರಮ ವಹಿಸಲಾಗಿದೆ. ಬಿಜೆಪಿ ಅವಧಿಯಲ್ಲಿ ‘ಪೇಸಿಎಂ’ ಎಂಬ ಪೋಸ್ಟರ್ ಅಂಟಿಸಿ ಗುಲ್ಲೆಬ್ಬಿಸಿದ್ದರು. ಶೇ 80 ರಷ್ಟು ಕಮಿಷನ್ ಬಗ್ಗೆ ರಾಹುಲ್ಗಾಂಧಿ ಉತ್ತರ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p><strong>‘ದುಪ್ಪಟ್ಟು ಕಮಿಷನ್ ಫಾರ್ಮುಲಾ ಯಾವುದು?’</strong></p><p>‘ದುಪ್ಪಟ್ಟು ಕಮಿಷನ್ಗೆ ಕಾರಣವಾಗಿರುವ ಫಾರ್ಮುಲಾ ಯಾವುದು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.</p><p>ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು‘ಜ್ಯೇಷ್ಠತೆ ಮತ್ತು ಪಾರದರ್ಶಕತೆಯನ್ನು ಮೀರಿ ಸ್ಪೆಷಲ್ ಫಾರ್ಮುಲಾ ಮೂಲಕ 15 ರಿಂದ 20 ರಷ್ಟು ಗುತ್ತಿಗೆದಾರರಿಗೆ ಮಾತ್ರ ಎಲ್ಒಸಿ ಬಿಡುಗಡೆ ಆಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರ ಸಂಘ ನಿಮ್ಮ ಆಪ್ತ ಸಚಿವರ ಇಲಾಖೆಗಳಲ್ಲೇ ಈ ರೀತಿ ವ್ಯವಸ್ಥೆ ಇದೆ ಎಂದು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದಲ್ಲಿ ದೂರಿದೆ. ಹಾಗಾದರೆ ಈ ಸ್ಪೆಷಲ್ ಫಾರ್ಮುಲಾ ವ್ಯವಸ್ಥೆ ಇರುವುದು ನಿಮ್ಮ ಗಮನಕ್ಕೂ ಇದೆ ಎಂದೇ ಅರ್ಥವಲ್ಲವೇ? ಗೊತ್ತಿದ್ದೂ ಸುಮ್ಮನಿರುವುದು ಎಂದರೆ ಅರ್ಥವೇನು?’ ಎಂದು ಅವರು ಕೇಳಿದ್ದಾರೆ.</p><p>‘ಮಠದೊಳಗಿನ ಬೆಕ್ಕು ಇಲಿಯ ಕಂಡೊಡನೆ ಪುಟನೆಗೆದಂತೆ ಕಾಣ ಎಂಬಂತಾಗಿದೆ ನಿಮ್ಮ ಸ್ಥಿತಿ. ನಿಮ್ಮದೀಗ 50–50 ಅವಧಿಯ ಶೇ 80ರ ಸರ್ಕಾರ’ ಎಂದು ಅವರು ವ್ಯಂಗ್ಯ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>