<p><strong>ಬೆಂಗಳೂರು</strong>: ಅಧಿಕಾರವಿದ್ದಾಗ 40% ಕಮಿಷನ್ , 40 ಸಾವಿರ ಕೋಟಿ ಲೂಟಿಯಲ್ಲಿ ತೊಡಗಿದ್ದ ಬಿಜೆಪಿ ಮುಖಂಡರು, ಇದೀಗ ಸಹೋದರರನ್ನು ಅಖಾಡಕ್ಕೆ ಇಳಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.ಮರ ಕಡಿದ ಪ್ರಕರಣ: ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು.<p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹ ಸಹೋದರ ಮರಗಳ್ಳತನಕ್ಕೆ, ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸಹೋದರ ಅಕ್ಕಿ ಕಳ್ಳತನದಲ್ಲಿ ತೊಡಗಿದ್ದಾರೆ. ಇನ್ಯಾವ ನಾಯಕರ ಸಹೋದರರು ಮತ್ತವ್ಯಾ ಕಳ್ಳದಂಧೆಯಲ್ಲಿ ತೊಡಗಿದ್ದಾರೆ?’ ಎಂದು ಪ್ರಶ್ನಿಸಿದೆ.</p><p>‘ನಾನು ತಿನ್ನುವುದಿಲ್ಲ ಹಾಗೂ ನಿಮಗೆ ತಿನ್ನಲು ಬಿಡುವುದಿಲ್ಲ’ ಎಂಬಂತೆ ಅನ್ನಭಾಗ್ಯದ ಅಕ್ಕಿ ಕದ್ದು ಬಡವರಿಗೆ ‘ನಾ ಖಾನೆದುಂಗಾ’ ಎನ್ನುತ್ತಿದೆಯೇ ಬಿಜೆಪಿ ಎಂದು ಕುಟುಕಿದೆ.</p><p>‘ಬಿಜೆಪಿ ನಾಯಕರು ತಮ್ಮ ಅಣ್ಣತಮ್ಮಂದಿರಿಗೆ ತಿನ್ನಿಸಲು ಹೊರಟಿರುವುದು ಪ್ರತಾಪ್ ಸಿಂಹ ಹಾಗೂ ಮಣಿಕಂಠ ರಾಥೋಡ್ ಸಹೋದರರ ಕಳ್ಳತನಗಳು ಈ ಬಗ್ಗೆ ಸಾಕ್ಷಿ ಹೇಳುತ್ತಿವೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಧಿಕಾರವಿದ್ದಾಗ 40% ಕಮಿಷನ್ , 40 ಸಾವಿರ ಕೋಟಿ ಲೂಟಿಯಲ್ಲಿ ತೊಡಗಿದ್ದ ಬಿಜೆಪಿ ಮುಖಂಡರು, ಇದೀಗ ಸಹೋದರರನ್ನು ಅಖಾಡಕ್ಕೆ ಇಳಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.ಮರ ಕಡಿದ ಪ್ರಕರಣ: ಸಂಸದ ಪ್ರತಾಪ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು.<p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ‘ಸಂಸದ ಪ್ರತಾಪ್ ಸಿಂಹ ಸಹೋದರ ಮರಗಳ್ಳತನಕ್ಕೆ, ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಸಹೋದರ ಅಕ್ಕಿ ಕಳ್ಳತನದಲ್ಲಿ ತೊಡಗಿದ್ದಾರೆ. ಇನ್ಯಾವ ನಾಯಕರ ಸಹೋದರರು ಮತ್ತವ್ಯಾ ಕಳ್ಳದಂಧೆಯಲ್ಲಿ ತೊಡಗಿದ್ದಾರೆ?’ ಎಂದು ಪ್ರಶ್ನಿಸಿದೆ.</p><p>‘ನಾನು ತಿನ್ನುವುದಿಲ್ಲ ಹಾಗೂ ನಿಮಗೆ ತಿನ್ನಲು ಬಿಡುವುದಿಲ್ಲ’ ಎಂಬಂತೆ ಅನ್ನಭಾಗ್ಯದ ಅಕ್ಕಿ ಕದ್ದು ಬಡವರಿಗೆ ‘ನಾ ಖಾನೆದುಂಗಾ’ ಎನ್ನುತ್ತಿದೆಯೇ ಬಿಜೆಪಿ ಎಂದು ಕುಟುಕಿದೆ.</p><p>‘ಬಿಜೆಪಿ ನಾಯಕರು ತಮ್ಮ ಅಣ್ಣತಮ್ಮಂದಿರಿಗೆ ತಿನ್ನಿಸಲು ಹೊರಟಿರುವುದು ಪ್ರತಾಪ್ ಸಿಂಹ ಹಾಗೂ ಮಣಿಕಂಠ ರಾಥೋಡ್ ಸಹೋದರರ ಕಳ್ಳತನಗಳು ಈ ಬಗ್ಗೆ ಸಾಕ್ಷಿ ಹೇಳುತ್ತಿವೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>