ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ವಿ. ಸುನಿಲ್ ಕುಮಾರ್ ಸೇರಿದಂತೆ ಕೆಲವರ ಹೆಸರುಗಳನ್ನು ಶಾಸಕರು ಸಲಹೆ ಮಾಡಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ಗಳಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಉಪ ನಾಯಕನ ಆಯ್ಕೆ ಸಂದರ್ಭದಲ್ಲಿ ಎರಡೂ ಕಡೆ ತಲಾ ಒಂದು ಸ್ಥಾನವನ್ನು ಕಟು ಹಿಂದುತ್ವ ಪ್ರತಿಪಾದಕರಿಗೆ ನೀಡಬೇಕು ಎಂಬ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.