<p><strong>ಬೆಂಗಳೂರು</strong>: ಇದೇ 6ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ವಿರೋಧ ಪಕ್ಷಗಳ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಭೆ ಸೇರಿ ಚರ್ಚೆ ನಡೆಸಿದರು.</p>.<p>ಪ್ರಮುಖ ಇಲಾಖೆಗಳ ವೈಫಲ್ಯಗಳನ್ನು ಸದನದಲ್ಲಿ ಪ್ರಸ್ತಾಪಿಸಬೇಕು. ಪ್ರತಿಯೊಂದು ವಿಷಯದ ಬಗ್ಗೆ ಆಳವಾಗಿ ಅಧ್ಯಯನ ನಡೆಸಿ ವಿಷಯವನ್ನು ಪ್ರಸ್ತಾಪಿಸಬೇಕು ಎಂದು ತೀರ್ಮಾನಿಸಲಾಯಿತು.</p>.<p>ಜನ ಸಾಮಾನ್ಯರು ಎದುರಿಸುತ್ತಿರುವ ತೊಂದರೆಗಳು, ಆರ್ಥಿಕ ಹೊರೆಯಾಗುವ ಸರ್ಕಾರದ ನಿರ್ಧಾರಗಳ ಬಗ್ಗೆ ಆಯ್ದ ನಾಯಕರು ಪ್ರಸ್ತಾಪಿಸಬೇಕು. ಕಳೆದ ಅಧಿವೇಶನದಲ್ಲಿ ನಿರ್ವಹಿಸಿದ ರೀತಿಯಲ್ಲೇ ಪೂರಕ ದಾಖಲೆಗಳನ್ನು ಮುಂದಿಟ್ಟು ವ್ಯವಸ್ಥಿತವಾಗಿ ಸರ್ಕಾರದ ವೈಫಲ್ಯವನ್ನು ಪ್ರಸ್ತಾಪಿಸಬೇಕು ಎಂದು ಸಲಹೆಗಳು ಬಂದವು. ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಸ್.ಆರ್.ವಿಶ್ವನಾಥ್ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇದೇ 6ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ವಿರೋಧ ಪಕ್ಷಗಳ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಭೆ ಸೇರಿ ಚರ್ಚೆ ನಡೆಸಿದರು.</p>.<p>ಪ್ರಮುಖ ಇಲಾಖೆಗಳ ವೈಫಲ್ಯಗಳನ್ನು ಸದನದಲ್ಲಿ ಪ್ರಸ್ತಾಪಿಸಬೇಕು. ಪ್ರತಿಯೊಂದು ವಿಷಯದ ಬಗ್ಗೆ ಆಳವಾಗಿ ಅಧ್ಯಯನ ನಡೆಸಿ ವಿಷಯವನ್ನು ಪ್ರಸ್ತಾಪಿಸಬೇಕು ಎಂದು ತೀರ್ಮಾನಿಸಲಾಯಿತು.</p>.<p>ಜನ ಸಾಮಾನ್ಯರು ಎದುರಿಸುತ್ತಿರುವ ತೊಂದರೆಗಳು, ಆರ್ಥಿಕ ಹೊರೆಯಾಗುವ ಸರ್ಕಾರದ ನಿರ್ಧಾರಗಳ ಬಗ್ಗೆ ಆಯ್ದ ನಾಯಕರು ಪ್ರಸ್ತಾಪಿಸಬೇಕು. ಕಳೆದ ಅಧಿವೇಶನದಲ್ಲಿ ನಿರ್ವಹಿಸಿದ ರೀತಿಯಲ್ಲೇ ಪೂರಕ ದಾಖಲೆಗಳನ್ನು ಮುಂದಿಟ್ಟು ವ್ಯವಸ್ಥಿತವಾಗಿ ಸರ್ಕಾರದ ವೈಫಲ್ಯವನ್ನು ಪ್ರಸ್ತಾಪಿಸಬೇಕು ಎಂದು ಸಲಹೆಗಳು ಬಂದವು. ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಸ್.ಆರ್.ವಿಶ್ವನಾಥ್ ಸಭೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>