<p><strong>ಬೆಂಗಳೂರು</strong>: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಸರ್ಕಾರ ಹಗೆತನದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿದರು.</p>.<p>ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಪ್ರಧಾನಕಾರ್ಯದರ್ಶಿ ಪಿ.ರಾಜೀವ್ ಜಂಟಿ ಹೇಳಿಕೆ ನೀಡಿದ್ದು, ತಾವು ಹಗೆತನದ ರಾಜಕಾರಣ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿದ್ದರು. ಆದರೆ, ಇದೀಗ ಸೇಡಿನ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದರು.</p>.<p>‘ಯಡಿಯೂರಪ್ಪ ಅವರು ದೆಹಲಿಯಲ್ಲಿದ್ದು, ಎರಡೇ ದಿನಗಳಲ್ಲಿ ಬರುವುದಾಗಿ ಹೇಳಿದ್ದರೂ ಗಡಿಬಿಡಿ ಮಾಡಿದ್ದಾರೆ. ನಾಲ್ಕು ತಿಂಗಳು ಇಲ್ಲದ ಗಡಿ ಬಿಡಿ ಕಾಂಗ್ರೆಸ್ಗೆ ಇವತ್ತು ಒಂದೇ ದಿನ ಬಂದಿದೆ. ಇವತ್ತೇ ಜಾಮೀನು ರಹಿತ ವಾರಂಟ್ ಪಡೆದು ಬಂಧನ ಮಾಡಲು ಹೋಗಿದ್ದಾರೆ’ ಎಂದು ಅವರು ದೂರಿದರು.</p>.<p>‘ಪೋಕ್ಸೊ ಪ್ರಕರಣ ದಾಖಲಿಸಿ ನಾಲ್ಕು ತಿಂಗಳು ಕಾಲ ಕಳೆದಿದೆ. ಆಗ ನೀವೆಲ್ಲಿ ಮಲಗಿದ್ದೀರಿ ಎಂದು ಜನರು ಕೇಳುವಂತಾಗಿದೆ. ಈ ಪ್ರಕರಣದಲ್ಲಿ ಹುರುಳಿಲ್ಲ ಎಂದು ಗೃಹ ಸಚಿವರೂ ಹೇಳಿದ್ದರು. ಇದೀಗ ರಾಹುಲ್ಗಾಂಧಿಯವರು ಕೋರ್ಟ್ ಮೆಟ್ಟಿಲು ಹತ್ತಿದ ಕಾರಣ ಬಿಜೆಪಿಯವರನ್ನೂ ಕೋರ್ಟಿಗೆ ತಂದು ನಿಲ್ಲಿಸಬೇಕೆಂಬ ಕಾಂಗ್ರೆಸ್ ಪಕ್ಷದ ದುರುದ್ದೇಶವು ಈಗ ಬಯಲಾಗಿದೆ’ ಎಂದು ಹೇಳಿದರು.</p>.<p>‘ಯಡಿಯೂರಪ್ಪ ವಿಚಾರದಲ್ಲಿ ಕೋರ್ಟ್ನಿಂದ ಬಂದ ಆದೇಶವನ್ನು ಗೌರವಿಸುತ್ತೇವೆ. ಆದರೆ, ಇದೊಂದು ರಾಜಕೀಯ ಷಡ್ಯಂತ್ರ ಅಥವಾ ರಾಜಕೀಯ ಪ್ರೇರಿತ ವಿಚಾರ. ಫೆಬ್ರುವರಿ 2 ರಂದು ಘಟನೆ ನಡೆದಿದೆ ಎಂದು ಹೇಳಿ ಮಾರ್ಚ್ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗ ಯಡಿಯೂರಪ್ಪ ಅವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವುದಾಗಿ ತಿಳಿಸಿದ್ದರು. ನಂತರ ಪೊಲೀಸ್ನವರು ಬರುವ ಅವಶ್ಯ ಇಲ್ಲ ಎಂದಿದ್ದರು. ಮನೆಗೆ ಬಂದು ಹೇಳಿಕೆಯನ್ನೂ ಪಡೆದಿದ್ದರು’ ಎಂದು ಹೇಳಿದರು.</p>.<p>‘ಈ ಬಗ್ಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ಕೇಸು ದಾಖಲಿಸಿದವರು ಮಾನಸಿಕ ಅಸ್ವಸ್ಥೆ, ಐಎಎಸ್, ಐಪಿಎಸ್ ಹಾಗೂ ರಾಜಕಾರಣಿಗಳ ಮೇಲೆ 60 ಕ್ಕೂ ಹೆಚ್ಚು ಕೇಸು ದಾಖಲಿಸಲಿದ್ದಾರೆ. ಆದ್ದರಿಂದ, ಆ ಕೇಸಿಗೆ ಮಹತ್ವ ಇಲ್ಲ ಎಂಬ ಮಾತನ್ನು ಹೇಳಿದ್ದರು’ ಎಂದರು.</p>.<p>‘ಈ ಪ್ರಕರಣದ ಬಿ ರಿಪೋರ್ಟ್ ನಿರೀಕ್ಷೆಯಲ್ಲಿದ್ದೆವು. ಆದರೆ ಕಳೆದ ಎರಡು– ಮೂರು ದಿನಗಳಲ್ಲಿ ದೊಡ್ಡ ಬೆಳವಣಿಗೆ ಆಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ಗಾಂಧಿ ಅವರ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದ್ದು, ಆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಗೆ ತೀರಿಸಿಕೊಳ್ಳಲು ಸುರ್ಜೇವಾಲಾ ಅವರ ಆದೇಶದಡಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರು ಸೇರಿ ಈ ಷಡ್ಯಂತ್ರ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕೇಸು ಕೊಟ್ಟವರು ತೀರಿಕೊಂಡಿದ್ದಾರೆ. ಕೇಸು ಕೊಟ್ಟ ಮಹಿಳೆಯ ಮಗನ ದೂರು ಪಡೆದು ತಕ್ಷಣಕ್ಕೆ ಕೋರ್ಟ್ ಮೆಟ್ಟಿಲು ಹತ್ತಿದ ಪೊಲೀಸರು ಹೀಗೆ ಮಾಡಿದ್ದಾರೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಾಂಗ್ರೆಸ್ ಸರ್ಕಾರ ಹಗೆತನದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿದರು.</p>.<p>ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಪ್ರಧಾನಕಾರ್ಯದರ್ಶಿ ಪಿ.ರಾಜೀವ್ ಜಂಟಿ ಹೇಳಿಕೆ ನೀಡಿದ್ದು, ತಾವು ಹಗೆತನದ ರಾಜಕಾರಣ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಭಾಷಣದಲ್ಲಿ ಹೇಳಿದ್ದರು. ಆದರೆ, ಇದೀಗ ಸೇಡಿನ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದರು.</p>.<p>‘ಯಡಿಯೂರಪ್ಪ ಅವರು ದೆಹಲಿಯಲ್ಲಿದ್ದು, ಎರಡೇ ದಿನಗಳಲ್ಲಿ ಬರುವುದಾಗಿ ಹೇಳಿದ್ದರೂ ಗಡಿಬಿಡಿ ಮಾಡಿದ್ದಾರೆ. ನಾಲ್ಕು ತಿಂಗಳು ಇಲ್ಲದ ಗಡಿ ಬಿಡಿ ಕಾಂಗ್ರೆಸ್ಗೆ ಇವತ್ತು ಒಂದೇ ದಿನ ಬಂದಿದೆ. ಇವತ್ತೇ ಜಾಮೀನು ರಹಿತ ವಾರಂಟ್ ಪಡೆದು ಬಂಧನ ಮಾಡಲು ಹೋಗಿದ್ದಾರೆ’ ಎಂದು ಅವರು ದೂರಿದರು.</p>.<p>‘ಪೋಕ್ಸೊ ಪ್ರಕರಣ ದಾಖಲಿಸಿ ನಾಲ್ಕು ತಿಂಗಳು ಕಾಲ ಕಳೆದಿದೆ. ಆಗ ನೀವೆಲ್ಲಿ ಮಲಗಿದ್ದೀರಿ ಎಂದು ಜನರು ಕೇಳುವಂತಾಗಿದೆ. ಈ ಪ್ರಕರಣದಲ್ಲಿ ಹುರುಳಿಲ್ಲ ಎಂದು ಗೃಹ ಸಚಿವರೂ ಹೇಳಿದ್ದರು. ಇದೀಗ ರಾಹುಲ್ಗಾಂಧಿಯವರು ಕೋರ್ಟ್ ಮೆಟ್ಟಿಲು ಹತ್ತಿದ ಕಾರಣ ಬಿಜೆಪಿಯವರನ್ನೂ ಕೋರ್ಟಿಗೆ ತಂದು ನಿಲ್ಲಿಸಬೇಕೆಂಬ ಕಾಂಗ್ರೆಸ್ ಪಕ್ಷದ ದುರುದ್ದೇಶವು ಈಗ ಬಯಲಾಗಿದೆ’ ಎಂದು ಹೇಳಿದರು.</p>.<p>‘ಯಡಿಯೂರಪ್ಪ ವಿಚಾರದಲ್ಲಿ ಕೋರ್ಟ್ನಿಂದ ಬಂದ ಆದೇಶವನ್ನು ಗೌರವಿಸುತ್ತೇವೆ. ಆದರೆ, ಇದೊಂದು ರಾಜಕೀಯ ಷಡ್ಯಂತ್ರ ಅಥವಾ ರಾಜಕೀಯ ಪ್ರೇರಿತ ವಿಚಾರ. ಫೆಬ್ರುವರಿ 2 ರಂದು ಘಟನೆ ನಡೆದಿದೆ ಎಂದು ಹೇಳಿ ಮಾರ್ಚ್ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಆಗ ಯಡಿಯೂರಪ್ಪ ಅವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವುದಾಗಿ ತಿಳಿಸಿದ್ದರು. ನಂತರ ಪೊಲೀಸ್ನವರು ಬರುವ ಅವಶ್ಯ ಇಲ್ಲ ಎಂದಿದ್ದರು. ಮನೆಗೆ ಬಂದು ಹೇಳಿಕೆಯನ್ನೂ ಪಡೆದಿದ್ದರು’ ಎಂದು ಹೇಳಿದರು.</p>.<p>‘ಈ ಬಗ್ಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ಕೇಸು ದಾಖಲಿಸಿದವರು ಮಾನಸಿಕ ಅಸ್ವಸ್ಥೆ, ಐಎಎಸ್, ಐಪಿಎಸ್ ಹಾಗೂ ರಾಜಕಾರಣಿಗಳ ಮೇಲೆ 60 ಕ್ಕೂ ಹೆಚ್ಚು ಕೇಸು ದಾಖಲಿಸಲಿದ್ದಾರೆ. ಆದ್ದರಿಂದ, ಆ ಕೇಸಿಗೆ ಮಹತ್ವ ಇಲ್ಲ ಎಂಬ ಮಾತನ್ನು ಹೇಳಿದ್ದರು’ ಎಂದರು.</p>.<p>‘ಈ ಪ್ರಕರಣದ ಬಿ ರಿಪೋರ್ಟ್ ನಿರೀಕ್ಷೆಯಲ್ಲಿದ್ದೆವು. ಆದರೆ ಕಳೆದ ಎರಡು– ಮೂರು ದಿನಗಳಲ್ಲಿ ದೊಡ್ಡ ಬೆಳವಣಿಗೆ ಆಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ಗಾಂಧಿ ಅವರ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದ್ದು, ಆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಗೆ ತೀರಿಸಿಕೊಳ್ಳಲು ಸುರ್ಜೇವಾಲಾ ಅವರ ಆದೇಶದಡಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರು ಸೇರಿ ಈ ಷಡ್ಯಂತ್ರ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಕೇಸು ಕೊಟ್ಟವರು ತೀರಿಕೊಂಡಿದ್ದಾರೆ. ಕೇಸು ಕೊಟ್ಟ ಮಹಿಳೆಯ ಮಗನ ದೂರು ಪಡೆದು ತಕ್ಷಣಕ್ಕೆ ಕೋರ್ಟ್ ಮೆಟ್ಟಿಲು ಹತ್ತಿದ ಪೊಲೀಸರು ಹೀಗೆ ಮಾಡಿದ್ದಾರೆ’ ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>