ಕಲಾಪ ಆರಂಭವಾದಾಗ ಸಚಿವರಾದ ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಶಿವರಾಜ ತಂಗಡಗಿ ಮತ್ತು ಮೂವರು ಶಾಸಕರು ಮಾತ್ರ ಆಡಳಿತ ಪಕ್ಷದ ಸಾಲಿನಲ್ಲಿದ್ದರು. ‘ಸರ್ಕಾರಕ್ಕೆ ಕಲಾಪ ನಡೆಸಲು ಆಸಕ್ತಿ ಇಲ್ಲ. ಸಚಿವರು, ಶಾಸಕರು, ಅಧಿಕಾರಿಗಳು ಕೂಡ ಸದನದಲ್ಲಿ ಇಲ್ಲ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅಸಮಾಧಾನ ವ್ಯಕ್ತಪಡಿಸಿದರು.