ಬೆಂಗಳೂರು: ಬಿಜೆಪಿ ಸರ್ಕಾರದ ನೂತನ ಸಚಿವರಾಗಿ 17 ಮಂದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
17 ಮಂದಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಭಾಯ್ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ ರಾಜ್ಯ ನಾಯಕರು, ನೂತನ ಸಚಿವರ ಸಂಬಂಧಿಗಳು, ಬೆಂಬಲಿಗರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
C N Ashwath Narayan & Govind M Karjol take oath as Karnataka Cabinet Ministers, in Bengaluru. pic.twitter.com/8rTgPtGudV
ಮೊದಲಿಗೆ ಬಿಜೆಪಿ ಹಿರಿಯ ನಾಯಕಗೋವಿಂದ ಕಾರಜೋಳ ಪ್ರಮಾಣ ವಚನ ಸ್ವೀಕರಿಸಿದರು. ನಂತರಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಕೆ.ಎಸ್ .ಈಶ್ವರಪ್ಪ, ಆರ್. ಅಶೋಕ,ಜಗದೀಶ್ ಶೆಟ್ಟರ್ ಪ್ರಮಾಣ ವಚನ ಪಡೆದರು.