'ಅಧಿಕಾರ ಸಿಕ್ಕಿದಾಗ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಸಚಿವರು ಸಿಗುವುದು ಕಡಿಮೆಯಾಗುತ್ತದೆ. ಆಗ ಮೊದಲಾಗಿ ನಮ್ಮಿಂದ ದೂರವಾಗುವವರು ಕಾರ್ಯಕರ್ತರು. ಕಮ್ಯುನಿಸ್ಟ್ ಪಕ್ಷದವರಲ್ಲಿ ಈಗಲೂ ಈ ವ್ಯವಸ್ಥೆ ಇದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವತಃ ಮುಖ್ಯಮಂತ್ರಿ ಅವರೇ ಪಕ್ಷದ ಕಚೇರಿಗೆ ಬಂದು ಅಹವಾಲು ಆಲಿಸುತ್ತಿದ್ದರು. ರಾಜ್ಯದಲ್ಲಿ ಇಂತಹ ವ್ಯವಸ್ಥೆ ರೂಪಿಸುವ ಸಲುವಾಗಿ ನಾನು ಕಾರ್ಯಕ್ರಮ ರೂಪಿಸಿದ್ದೇನೆ' ಎಂದು ಸಚಿವ ರವಿ 'ಪ್ರಜಾವಾಣಿ'ಗೆ ತಿಳಿಸಿದರು.