<p><strong>ನವದೆಹಲಿ:</strong> ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಷ ನಡೆಯಲಿರುವ 9 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ‘ಯಾವುದೇ ರಾಜ್ಯದಲ್ಲಿ ಪಕ್ಷ ಸೋಲದಂತೆ ನೋಡಿಕೊಳ್ಳಬೇಕು. ಈ ದಿಸೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಕೆಲಸ ಮಾಡಬೇಕು’ ಎಂದು ಸೂಚಿಸಿದರು. </p>.<p>ನವದೆಹಲಿಯಲ್ಲಿ ಸೋಮವಾರ ಆರಂಭವಾದ ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.</p>.<p>ಕೇಂದ್ರದಲ್ಲಿ ಮೂರನೇ ಸಲ ಅಧಿಕಾರದ ಚುಕ್ಕಾಣಿ ಹಿಡಿಯಲು ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಪಕ್ಷವು ಹಲವು ಕಸರತ್ತುಗಳನ್ನು ನಡೆಸುತ್ತಿದೆ. ಕಾರ್ಯಕಾರಿಣಿಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ರೋಡ್ ಷೋ ನಡೆಸಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುರುಪು ತುಂಬಿದರು. </p>.<p>ಕಾರ್ಯಕಾರಿಣಿಯಲ್ಲಿ ನಡ್ಡಾ ಮಾಡಿರುವ ಭಾಷಣದ ಬಗ್ಗೆ ಪಕ್ಷದ ಮುಖಂಡ ರವಿಶಂಕರ್ ಪ್ರಸಾದ್ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಆಗಿರುವ ಪ್ರಗತಿಯನ್ನು ನಡ್ಡಾ ಶ್ಲಾಘಿಸಿದರು ಎಂದು ರವಿಶಂಕರ್ ಪ್ರಸಾದ್ ತಿಳಿಸಿದರು. </p>.<p>‘ದುರ್ಬಲ ಮತಗಟ್ಟೆಗಳನ್ನು ಗುರುತಿಸಿ ಬಲವರ್ಧನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಸೂಚಿಸಿದ್ದರು. ಈಗಾಗಲೇ 70 ಸಾವಿರ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಂತಹ ಬೂತ್ ಗಳ ಸಂಖ್ಯೆ 1.30 ಲಕ್ಷ ಇದೆ. ಸಂಘಟನೆ ಬಲಪಡಿಸಿ ಅವುಗಳನ್ನು ಗೆಲ್ಲಲು ಕಾರ್ಯತಂತ್ರ ಹೆಣೆಯುವ ಬಗ್ಗೆಯೂ ಅಧ್ಯಕ್ಷರು ಸಲಹೆಗಳನ್ನು ನೀಡಿದರು’ ಎಂದರು. </p>.<p>ಇತ್ತೀಚಿನ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವನ್ನು ಅಸಾಧಾರಣ ಹಾಗೂ ಐತಿಹಾಸಿಕ ಎಂದು ಬಣ್ಣಿಸಿದ ನಡ್ಡಾ, ಪಕ್ಷವು 182 ಸ್ಥಾನಗಳ ಪೈಕಿ 156 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ ಎಂದರು. </p>.<p>ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಸೋಲಿನಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯ ಇಲ್ಲ. ಅಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಡೆದ ಮತಗಳ ಅಂತರ ಶೇ 1ಕ್ಕಿಂತಲೂ ಕಡಿಮೆ ಇದೆ ಎಂದರು. </p>.<p>‘ಭಾರತವು ವಿಶ್ವದ ಐದನೇಅತೀ ದೊಡ್ಡ ಆರ್ಥಿಕತೆ ಆಗಿದೆ. ಮೊಬೈಲ್ ಫೋನ್ಗಳ ಎರಡನೇ ಅತೀ ದೊಡ್ಡ ತಯಾರಕ ಹಾಗೂ ಆಟೋ ವಲಯದಲ್ಲಿ ಮೂರನೇ ದೊಡ್ಡ ತಯಾರಕ ಆಗಿದೆ. ಈ ಮೊದಲು ದಿನಕ್ಕೆ 12 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿತ್ತು. ಈಗ ಅದು 37 ಕಿ.ಮೀ.ಗೆ ಏರಿದೆ’ ಎಂದು ಅವರು ಹೇಳಿದರು.</p>.<p>ಉಚಿತ ಧಾನ್ಯ ವಿತರಣೆ ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರ ಶ್ರೇಯೋಭಿವೃದ್ಧಿಗೆ ಬಿಜೆಪಿ ಸರ್ಕಾರ ಶ್ರಮಿಸಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಷ ನಡೆಯಲಿರುವ 9 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ‘ಯಾವುದೇ ರಾಜ್ಯದಲ್ಲಿ ಪಕ್ಷ ಸೋಲದಂತೆ ನೋಡಿಕೊಳ್ಳಬೇಕು. ಈ ದಿಸೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಕೆಲಸ ಮಾಡಬೇಕು’ ಎಂದು ಸೂಚಿಸಿದರು. </p>.<p>ನವದೆಹಲಿಯಲ್ಲಿ ಸೋಮವಾರ ಆರಂಭವಾದ ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.</p>.<p>ಕೇಂದ್ರದಲ್ಲಿ ಮೂರನೇ ಸಲ ಅಧಿಕಾರದ ಚುಕ್ಕಾಣಿ ಹಿಡಿಯಲು ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಪಕ್ಷವು ಹಲವು ಕಸರತ್ತುಗಳನ್ನು ನಡೆಸುತ್ತಿದೆ. ಕಾರ್ಯಕಾರಿಣಿಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ರೋಡ್ ಷೋ ನಡೆಸಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹುರುಪು ತುಂಬಿದರು. </p>.<p>ಕಾರ್ಯಕಾರಿಣಿಯಲ್ಲಿ ನಡ್ಡಾ ಮಾಡಿರುವ ಭಾಷಣದ ಬಗ್ಗೆ ಪಕ್ಷದ ಮುಖಂಡ ರವಿಶಂಕರ್ ಪ್ರಸಾದ್ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಆಗಿರುವ ಪ್ರಗತಿಯನ್ನು ನಡ್ಡಾ ಶ್ಲಾಘಿಸಿದರು ಎಂದು ರವಿಶಂಕರ್ ಪ್ರಸಾದ್ ತಿಳಿಸಿದರು. </p>.<p>‘ದುರ್ಬಲ ಮತಗಟ್ಟೆಗಳನ್ನು ಗುರುತಿಸಿ ಬಲವರ್ಧನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಸೂಚಿಸಿದ್ದರು. ಈಗಾಗಲೇ 70 ಸಾವಿರ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಂತಹ ಬೂತ್ ಗಳ ಸಂಖ್ಯೆ 1.30 ಲಕ್ಷ ಇದೆ. ಸಂಘಟನೆ ಬಲಪಡಿಸಿ ಅವುಗಳನ್ನು ಗೆಲ್ಲಲು ಕಾರ್ಯತಂತ್ರ ಹೆಣೆಯುವ ಬಗ್ಗೆಯೂ ಅಧ್ಯಕ್ಷರು ಸಲಹೆಗಳನ್ನು ನೀಡಿದರು’ ಎಂದರು. </p>.<p>ಇತ್ತೀಚಿನ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವನ್ನು ಅಸಾಧಾರಣ ಹಾಗೂ ಐತಿಹಾಸಿಕ ಎಂದು ಬಣ್ಣಿಸಿದ ನಡ್ಡಾ, ಪಕ್ಷವು 182 ಸ್ಥಾನಗಳ ಪೈಕಿ 156 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ ಎಂದರು. </p>.<p>ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಸೋಲಿನಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯ ಇಲ್ಲ. ಅಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಡೆದ ಮತಗಳ ಅಂತರ ಶೇ 1ಕ್ಕಿಂತಲೂ ಕಡಿಮೆ ಇದೆ ಎಂದರು. </p>.<p>‘ಭಾರತವು ವಿಶ್ವದ ಐದನೇಅತೀ ದೊಡ್ಡ ಆರ್ಥಿಕತೆ ಆಗಿದೆ. ಮೊಬೈಲ್ ಫೋನ್ಗಳ ಎರಡನೇ ಅತೀ ದೊಡ್ಡ ತಯಾರಕ ಹಾಗೂ ಆಟೋ ವಲಯದಲ್ಲಿ ಮೂರನೇ ದೊಡ್ಡ ತಯಾರಕ ಆಗಿದೆ. ಈ ಮೊದಲು ದಿನಕ್ಕೆ 12 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿತ್ತು. ಈಗ ಅದು 37 ಕಿ.ಮೀ.ಗೆ ಏರಿದೆ’ ಎಂದು ಅವರು ಹೇಳಿದರು.</p>.<p>ಉಚಿತ ಧಾನ್ಯ ವಿತರಣೆ ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರ ಶ್ರೇಯೋಭಿವೃದ್ಧಿಗೆ ಬಿಜೆಪಿ ಸರ್ಕಾರ ಶ್ರಮಿಸಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>