ಈ ಸಮಾವೇಶದಲ್ಲಿ ಎಲ್ಲ ಎಸ್ಟಿ ಸಮುದಾಯದವರು ಭಾಗವಹಿಸಿ ಮೀಸಲಾತಿ ಹೆಚ್ಚಳಕ್ಕೆ ಸಂತಸ ಸೂಚಿಸಿ, ವಿಜಯೋತ್ಸವ ಆಚರಿಸಲಿದ್ದಾರೆ. 68 ಕ್ಕೂ ಹೆಚ್ಚು ಬುಡಕಟ್ಟು ಕಲಾ ತಂಡಗಳು ಪಾಲ್ಗೊಳ್ಳಲಿವೆ. ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮಧ್ಯಕರ್ನಾಟಕದ ಸುತ್ತಲಿನ ಪ್ರದೇಶಗಳಿಂದ ಆರು ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಿಂದ 4 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ 6,200 ಬಸ್ ವ್ಯವಸ್ಥೆ ಮಾಡಲಾಗಿದ್ದು, 15 ರಿಂದ 18 ಸಾವಿರ ಕ್ರೂಸರ್ ವಾಹನಗಳ ವ್ಯವಸ್ಥಡ ಮಾಡಲಾಗಿದೆ. ಬಳ್ಳಾರಿಯಲ್ಲಿ 28 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.