ಚುನಾವಣಾ ಪ್ರಚಾರಕ್ಕೆ ಇನ್ನೆರಡೇ ದಿನಗಳು ಬಾಕಿ ಉಳಿದಿರುವಾಗ ಸೋಮವಾರ ಇಲ್ಲಿ ಕಾಣಿಸಿಕೊಂಡ ಅವರು, ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ, ‘ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ನಿಜ. ಕಾಂಗ್ರೆಸ್ ಪಕ್ಷ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಬಿಜೆಪಿ ಸೇರುತ್ತೇನೆ ಎಂದಾಗ ಬಿ. ಶ್ರೀರಾಮುಲು ನನ್ನನ್ನು ಸ್ವಾಗತಿಸಿದರು. ಆದರೆ, ಉಪಚುನಾವಣೆ ಮುಗಿಯುವುದಕ್ಕೆ ಬಂದರೂ ಇದುವರೆಗೆ ನನ್ನನ್ನು ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಂಡಿಲ್ಲ’ ಎಂದರು.