<p><strong>ಬೆಂಗಳೂರು:</strong> ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆ ಇದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.</p>.<p>ಮೇಕೆದಾಟು ಯೋಜನೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ’ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆಯಾಗಿದೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ಬದ್ಧತೆಯೂ ಹೌದು. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿನಾಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆಯಿದೆಯೇ? ಎಂದು ಕಿಡಿಕಾರಿದೆ.</p>.<p><br />'ಮೇಕೆದಾಟು ಯೋಜನೆ ಜಾರಿಗಾಗಿ ಆಯೋಜಿಸಿರುವ ಪಾದಯಾತ್ರೆಯನ್ನು ಡಿ.ಕೆ.ಶಿವಕುಮಾರ್ ಅವರು ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿಕೊಂಡಿದ್ದಾರೆ. ಈ ಹೋರಾಟದಲ್ಲಿ ಭಾಗಿಯಾಗುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಮಾಣಪತ್ರ ನೀಡಲಿದ್ದಾರಂತೆ. ಇತಿಹಾಸ ಹಾಗೂ ಅಧ್ಯಯನದ ಕೊರತೆ ಮನುಷ್ಯನನ್ನು ಯಾವ ಹಂತಕ್ಕೂ ಕರೆದೊಯ್ಯಬಹುದೆಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ?‘ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ಮೇಕೆದಾಟು ಸಮಾನಾಂತರ ಅಣೆಕಟ್ಟೆ ನಿರ್ಮಾಣ ಯೋಜನೆ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/district/dharwad/siddaramaiah-nowadays-making-false-allegation-says-cm-basavaj-bommai-890564.html" target="_blank">ಸಿದ್ದರಾಮಯ್ಯರ ಇತ್ತೀಚಿನ ವರ್ತನೆಗಳಿಂದ ಭಾರೀ ಬೇಸರವಾಗುತ್ತಿದೆ: ಸಿಎಂ ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆ ಇದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.</p>.<p>ಮೇಕೆದಾಟು ಯೋಜನೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ’ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆಯಾಗಿದೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ಬದ್ಧತೆಯೂ ಹೌದು. ಆದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿನಾಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆಯಿದೆಯೇ? ಎಂದು ಕಿಡಿಕಾರಿದೆ.</p>.<p><br />'ಮೇಕೆದಾಟು ಯೋಜನೆ ಜಾರಿಗಾಗಿ ಆಯೋಜಿಸಿರುವ ಪಾದಯಾತ್ರೆಯನ್ನು ಡಿ.ಕೆ.ಶಿವಕುಮಾರ್ ಅವರು ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿಕೊಂಡಿದ್ದಾರೆ. ಈ ಹೋರಾಟದಲ್ಲಿ ಭಾಗಿಯಾಗುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಮಾಣಪತ್ರ ನೀಡಲಿದ್ದಾರಂತೆ. ಇತಿಹಾಸ ಹಾಗೂ ಅಧ್ಯಯನದ ಕೊರತೆ ಮನುಷ್ಯನನ್ನು ಯಾವ ಹಂತಕ್ಕೂ ಕರೆದೊಯ್ಯಬಹುದೆಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ?‘ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.</p>.<p>ಮೇಕೆದಾಟು ಸಮಾನಾಂತರ ಅಣೆಕಟ್ಟೆ ನಿರ್ಮಾಣ ಯೋಜನೆ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿತ್ತು.</p>.<p><strong>ಇದನ್ನೂ ಓದಿ... <a href="https://www.prajavani.net/district/dharwad/siddaramaiah-nowadays-making-false-allegation-says-cm-basavaj-bommai-890564.html" target="_blank">ಸಿದ್ದರಾಮಯ್ಯರ ಇತ್ತೀಚಿನ ವರ್ತನೆಗಳಿಂದ ಭಾರೀ ಬೇಸರವಾಗುತ್ತಿದೆ: ಸಿಎಂ ಬೊಮ್ಮಾಯಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>