'ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ. ಆದರೆ, ಕಟ್ಟಡ ಪೂರ್ಣಗೊಳ್ಳುವ 10–12 ತಿಂಗಳು ಮೊದಲೇ ರಾಮನ ಮೂರ್ತಿ ಪ್ರತಿಷ್ಠಾಪನೆಯ ಹಿಂದಿರುವ ಬಿಜೆಪಿಯ ರಾಜಕೀಯಕ್ಕೆ ನಮ್ಮ ವಿರೋಧವಿದೆ. ಇದು ಬಿಜೆಪಿ, ಆರೆಸ್ಸೆಸ್ ಕಾರ್ಯಕ್ರಮ ಆಗಿರುವುದರಿಂದ, ಇದೇ 22ರ ಕಾರ್ಯಕ್ರಮ ಬಹಿಷ್ಕರಿಸಲು ಪಕ್ಷ ನಿರ್ಧರಿಸಿದೆ. ಆದರೆ, ಬಿಜೆಪಿಯವರು ಕಾಂಗ್ರೆಸ್ ಪಕ್ಷವು ರಾಮಮಂದಿರವನ್ನು ಬಹಿಷ್ಕರಿಸಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ’ ಎಂದೂ ದೂರಿದರು.