<p><strong>ಬೆಂಗಳೂರು</strong>: ‘ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುವ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದರು. ಈಗ ಅಲ್ಲಿ ಸಾಲು ಸಾಲು ಬಾಣಂತಿಯರು ಸಾಯುತ್ತಿದ್ದರೂ ಸುಳಿಯುತ್ತಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದರು. </p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಳ್ಳಾರಿಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ, ಆರೋಗ್ಯ ಸಚಿವರು ಅಲ್ಲಿಗೆ ತೆರಳುವ ಸೌಜನ್ಯ ತೋರಲಿಲ್ಲ. ಮಹಿಳೆಯರ ಜೀವ ರಕ್ಷಣೆ ಇವರಿಗೆ ಬೇಡವಾಯಿತೇ’ ಎಂದು ಪ್ರಶ್ನಿಸಿದರು.</p>.<p>‘ಸಿದ್ದರಾಮಯ್ಯ ಅವರು ಹಲವು ಹಗರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವುಗಳಿಂದ ಬಿಡಿಸಿಕೊಳ್ಳಲೇ ಅವರು ಒದ್ದಾಡುತ್ತಿದ್ದಾರೆ. ಅತ್ತಲೇ ಗಮನವಿದ್ದು, ರಾಜ್ಯದ ಆಡಳಿತವನ್ನು ಕಡೆಗಣಿಸಿದ್ದಾರೆ’ ಎಂದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಇಲಾಖೆಯ ಆಡಳಿತ ಅವರ ಕೈತಪ್ಪಿದೆ. ಅವರು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಜನರ ಜೀವದ ಬಗ್ಗೆ ಸರ್ಕಾರಕ್ಕಿರುವ ಬೇಜವಾಬ್ದಾರಿ ಮತ್ತು ಭ್ರಷ್ಟಾಚಾರದ ಕಾರಣದಿಂದಲೇ ಇಂತಹ ಅವಘಡಗಳು ಸಂಭವಿಸಿವೆ. ರಾಜ್ಯ ಸರ್ಕಾರವು ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುವ ಮುನ್ನ ಬಳ್ಳಾರಿ ಜಪ ಮಾಡುತ್ತಿದ್ದರು. ಈಗ ಅಲ್ಲಿ ಸಾಲು ಸಾಲು ಬಾಣಂತಿಯರು ಸಾಯುತ್ತಿದ್ದರೂ ಸುಳಿಯುತ್ತಿಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದರು. </p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಳ್ಳಾರಿಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ, ಆರೋಗ್ಯ ಸಚಿವರು ಅಲ್ಲಿಗೆ ತೆರಳುವ ಸೌಜನ್ಯ ತೋರಲಿಲ್ಲ. ಮಹಿಳೆಯರ ಜೀವ ರಕ್ಷಣೆ ಇವರಿಗೆ ಬೇಡವಾಯಿತೇ’ ಎಂದು ಪ್ರಶ್ನಿಸಿದರು.</p>.<p>‘ಸಿದ್ದರಾಮಯ್ಯ ಅವರು ಹಲವು ಹಗರಣಗಳಲ್ಲಿ ಸಿಲುಕಿಕೊಂಡಿದ್ದಾರೆ. ಅವುಗಳಿಂದ ಬಿಡಿಸಿಕೊಳ್ಳಲೇ ಅವರು ಒದ್ದಾಡುತ್ತಿದ್ದಾರೆ. ಅತ್ತಲೇ ಗಮನವಿದ್ದು, ರಾಜ್ಯದ ಆಡಳಿತವನ್ನು ಕಡೆಗಣಿಸಿದ್ದಾರೆ’ ಎಂದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಇಲಾಖೆಯ ಆಡಳಿತ ಅವರ ಕೈತಪ್ಪಿದೆ. ಅವರು ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಜನರ ಜೀವದ ಬಗ್ಗೆ ಸರ್ಕಾರಕ್ಕಿರುವ ಬೇಜವಾಬ್ದಾರಿ ಮತ್ತು ಭ್ರಷ್ಟಾಚಾರದ ಕಾರಣದಿಂದಲೇ ಇಂತಹ ಅವಘಡಗಳು ಸಂಭವಿಸಿವೆ. ರಾಜ್ಯ ಸರ್ಕಾರವು ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>