<p><strong>ಬೆಂಗಳೂರು: </strong>ಜಿಂದಾಲ್ ಸಂಸ್ಥೆಗೆ ಭೂಮಿ ಮಂಜೂರು ಮಾಡುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ನಾಯಕರು ಇಂದು ಮುಖ್ಯಮಂತ್ರಿ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.</p>.<p>ಬೆಂಗಳೂರಿನಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ನಡೆಯುತ್ತಿದ್ದ ಆಹೋರಾತ್ರಿ ಧರಣಿ ಸ್ಥಳದಿಂದ ಬಿಜೆಪಿ ನಾಯಕರು ಮುಖ್ಯಮಂತ್ರಿ ಗೃಹ ಕಚೇರಿ ಬಳಿಗೆ ಮೆರವಣಿಗೆ ಮೂಲಕ ತೆರಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಸಿಎಂ ಗೃಹ ಕಚೇರಿಯತ್ತ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಗಾಂಧಿ ಭವನದ ಬಳಿಯೇ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಕರೆದೊಯ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/cm-hdk-invites-bjp-discussion-644492.html" target="_blank">ಜಿಂದಾಲ್, ಬರ, ಸಾಲಮನ್ನಾ ಚರ್ಚೆಗೆ ಬನ್ನಿ, ನಾನು ಸಿದ್ಧ: ಬಿಜೆಪಿಗೆ ಸಿಎಂ ಆಹ್ವಾನ</a></strong></p>.<p>ಪ್ರತಿಭಟನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ, ಶಾಸಕರಾದಆರ್.ಅಶೋಕ್, ರೇಣುಕಾಚಾರ್ಯ, ಕರುಣಾಕರ ರೆಡ್ಡಿ ಮತ್ತಿತರರುಇದ್ದರು. ಮೆರವಣಿಗೆ ಸಮಯದಲ್ಲಿ ತಳ್ಳಾಟ ನಡೆದು, ಅಶೋಕ್ ಹೆಬ್ಬೆರಳಿಗೆ ಗಾಯವಾಯಿತು.ಬಿಜೆಪಿ ಮೆರವಣಿಗೆಯಿಂದಾಗಿ ಶೇಷಾದ್ರಿಪುರಂ ಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.</p>.<p>ಇದಕ್ಕೂ ಮೊದಲು, ಜಿಂದಾಲ್, ಬರ, ಸಾಲ ಮನ್ನಾ ಕುರಿತು ಚರ್ಚೆಗೆ ಬರುವಂತೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ್ದರು. ಈ ಬಗ್ಗೆ ಶನಿವಾರ ರಾತ್ರಿಯೇ ಟ್ವೀಟ್ ಮಾಡಿದ್ದ ಸಿಎಂ, ಭಾನುವಾರ ಬೆಳಗ್ಗೆ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದರು. ಇದ್ಯಾವುದನ್ನೂ ಪರಿಗಣಿಸಿದ ಬಿಜೆಪಿ ನಾಯಕರು ಹೋರಾಟ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಿಂದಾಲ್ ಸಂಸ್ಥೆಗೆ ಭೂಮಿ ಮಂಜೂರು ಮಾಡುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ನಾಯಕರು ಇಂದು ಮುಖ್ಯಮಂತ್ರಿ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.</p>.<p>ಬೆಂಗಳೂರಿನಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ನಡೆಯುತ್ತಿದ್ದ ಆಹೋರಾತ್ರಿ ಧರಣಿ ಸ್ಥಳದಿಂದ ಬಿಜೆಪಿ ನಾಯಕರು ಮುಖ್ಯಮಂತ್ರಿ ಗೃಹ ಕಚೇರಿ ಬಳಿಗೆ ಮೆರವಣಿಗೆ ಮೂಲಕ ತೆರಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಈ ಮೆರವಣಿಗೆಯ ನೇತೃತ್ವ ವಹಿಸಿದ್ದರು. ಸಿಎಂ ಗೃಹ ಕಚೇರಿಯತ್ತ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಗಾಂಧಿ ಭವನದ ಬಳಿಯೇ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದು ಕರೆದೊಯ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/stories/stateregional/cm-hdk-invites-bjp-discussion-644492.html" target="_blank">ಜಿಂದಾಲ್, ಬರ, ಸಾಲಮನ್ನಾ ಚರ್ಚೆಗೆ ಬನ್ನಿ, ನಾನು ಸಿದ್ಧ: ಬಿಜೆಪಿಗೆ ಸಿಎಂ ಆಹ್ವಾನ</a></strong></p>.<p>ಪ್ರತಿಭಟನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ, ಶಾಸಕರಾದಆರ್.ಅಶೋಕ್, ರೇಣುಕಾಚಾರ್ಯ, ಕರುಣಾಕರ ರೆಡ್ಡಿ ಮತ್ತಿತರರುಇದ್ದರು. ಮೆರವಣಿಗೆ ಸಮಯದಲ್ಲಿ ತಳ್ಳಾಟ ನಡೆದು, ಅಶೋಕ್ ಹೆಬ್ಬೆರಳಿಗೆ ಗಾಯವಾಯಿತು.ಬಿಜೆಪಿ ಮೆರವಣಿಗೆಯಿಂದಾಗಿ ಶೇಷಾದ್ರಿಪುರಂ ಭಾಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.</p>.<p>ಇದಕ್ಕೂ ಮೊದಲು, ಜಿಂದಾಲ್, ಬರ, ಸಾಲ ಮನ್ನಾ ಕುರಿತು ಚರ್ಚೆಗೆ ಬರುವಂತೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ್ದರು. ಈ ಬಗ್ಗೆ ಶನಿವಾರ ರಾತ್ರಿಯೇ ಟ್ವೀಟ್ ಮಾಡಿದ್ದ ಸಿಎಂ, ಭಾನುವಾರ ಬೆಳಗ್ಗೆ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದರು. ಇದ್ಯಾವುದನ್ನೂ ಪರಿಗಣಿಸಿದ ಬಿಜೆಪಿ ನಾಯಕರು ಹೋರಾಟ ಮುಂದುವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>