ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ ₹6,000 ಜತೆ, ಹೆಚ್ಚುವರಿಯಾಗಿ ರಾಜ್ಯ ಸರ್ಕಾರ ನೀಡುತ್ತಿದ್ದ ₹4,000 ನಿಲ್ಲಿಸಲಾಗಿದೆ. ಕ್ಷೀರ ಸಮೃದ್ಧಿ ಬ್ಯಾಂಕ್, ಗೋಶಾಲೆ ಯೋಜನೆಗಳನ್ನೂ ನಿಲ್ಲಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ದೃಷ್ಟಿಯಿಂದಲೂ ರೈತ ವಿರೋಧಿ ನಿಲುವು ತಳೆದಿದೆ. ರೈತರ ಪರವಾಗಿದ್ದ ಎಪಿಎಂಸಿ ಕಾಯ್ದೆಯನ್ನು ದಲ್ಲಾಳಿಗಳ ಪರವಾಗಿ ಮಾಡಿದೆ ಎಂದು ದೂರಿದರು.