<p>ಬೆಂಗಳೂರು:ಸಂಸದ ಡಿ.ಕೆ.ಸುರೇಶ್ ಅವರು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.</p>.<p>‘ರಾಮನಗರದಲ್ಲಿ ನಡೆದಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಅವರ ಎದುರಲ್ಲೇ ಸುರೇಶ್ ಅವರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದು ಅವರ ಗೂಂಡಾ ಪ್ರವೃತ್ತಿಯನ್ನು ಬಿಂಬಿಸುತ್ತದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ವೇದಿಕೆಯ ಮೇಲಿದ್ದ ಮೈಕ್ ಕಿತ್ತೆಸೆದಿರುವುದು ಕೂಡ ಖಂಡನಾರ್ಹ. ಆ ಮೂಲಕ ಅವರು ಸುರೇಶ್ ಅವರ ಗೂಂಡಾ ವರ್ತನೆಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಇಬ್ಬರ ಮೇಲೂ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. </p>.<p>‘ಕಾಂಗ್ರೆಸ್ ನಾಯಕರ ಗೂಂಡಾ ವರ್ತನೆಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ರಾಮನಗರ ಚಲೋ ಹಮ್ಮಿಕೊಳ್ಳಲಿದ್ದೇವೆ’ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಗೌಡ ಹೇಳಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಬ್ಯಾರಿಕೇಡ್ಗಳನ್ನು ತಳ್ಳಿ ಮನೆಗೆ ಮುತ್ತಿಗೆ ಹಾಕಲು ಮುಂದಾದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.</p>.<p>ಯುವ ಮೋರ್ಚಾ ಸಂಘಟನಾ ಕಾರ್ಯದರ್ಶಿ ದಶರಥ್, ರಾಜ್ಯ ಕೋಶಾಧ್ಯಕ್ಷ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಎಸ್.ವಿ.ವಿನೋದ್ಕುಮಾರ್, ಅಭಿಲಾಷ್ ರೆಡ್ಡಿ (ಬೆಂಗಳೂರು ಕೇಂದ್ರ ಜಿಲ್ಲೆ) ಮತ್ತು ಪುನೀತ್ ರೆಡ್ಡಿ (ಬೆಂಗಳೂರು ದಕ್ಷಿಣ ಜಿಲ್ಲೆ) ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು:ಸಂಸದ ಡಿ.ಕೆ.ಸುರೇಶ್ ಅವರು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.</p>.<p>‘ರಾಮನಗರದಲ್ಲಿ ನಡೆದಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಅವರ ಎದುರಲ್ಲೇ ಸುರೇಶ್ ಅವರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದು ಅವರ ಗೂಂಡಾ ಪ್ರವೃತ್ತಿಯನ್ನು ಬಿಂಬಿಸುತ್ತದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ವೇದಿಕೆಯ ಮೇಲಿದ್ದ ಮೈಕ್ ಕಿತ್ತೆಸೆದಿರುವುದು ಕೂಡ ಖಂಡನಾರ್ಹ. ಆ ಮೂಲಕ ಅವರು ಸುರೇಶ್ ಅವರ ಗೂಂಡಾ ವರ್ತನೆಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಇಬ್ಬರ ಮೇಲೂ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು. </p>.<p>‘ಕಾಂಗ್ರೆಸ್ ನಾಯಕರ ಗೂಂಡಾ ವರ್ತನೆಯನ್ನು ಖಂಡಿಸಿ ಮುಂದಿನ ದಿನಗಳಲ್ಲಿ ರಾಮನಗರ ಚಲೋ ಹಮ್ಮಿಕೊಳ್ಳಲಿದ್ದೇವೆ’ ಎಂದು ಬೆಂಗಳೂರು ಉತ್ತರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಗೌಡ ಹೇಳಿದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಬ್ಯಾರಿಕೇಡ್ಗಳನ್ನು ತಳ್ಳಿ ಮನೆಗೆ ಮುತ್ತಿಗೆ ಹಾಕಲು ಮುಂದಾದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.</p>.<p>ಯುವ ಮೋರ್ಚಾ ಸಂಘಟನಾ ಕಾರ್ಯದರ್ಶಿ ದಶರಥ್, ರಾಜ್ಯ ಕೋಶಾಧ್ಯಕ್ಷ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಎಸ್.ವಿ.ವಿನೋದ್ಕುಮಾರ್, ಅಭಿಲಾಷ್ ರೆಡ್ಡಿ (ಬೆಂಗಳೂರು ಕೇಂದ್ರ ಜಿಲ್ಲೆ) ಮತ್ತು ಪುನೀತ್ ರೆಡ್ಡಿ (ಬೆಂಗಳೂರು ದಕ್ಷಿಣ ಜಿಲ್ಲೆ) ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>