ತೆರಿಗೆ ಏರಿಕೆ ಮಾಡಿದ್ದರೂ ನೆರೆಯ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದ ರಾಜ್ಯಗಳಲ್ಲಿರುವುದಕ್ಕಿಂತ ಕರ್ನಾಟಕದಲ್ಲಿನ ದರ ಕಡಿಮೆಯಿದೆ. ರಾಜ್ಯದ ಪಾಲಿನ ಹಣವನ್ನು ಕೇಂದ್ರ ಕೊಟ್ಟಿದ್ದರೆ ಮಾರಾಟ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಿದ್ದರಾಮಯ್ಯ ತಾವು ಮಾತ್ರ ಟೋಪಿ ಹಾಕುವುದಲ್ಲ. ಜನರಿಗೆಲ್ಲ ಟೋಪಿ ಹಾಕುತ್ತಿದ್ದಾರೆ. ಟೋಪಿ ಹಾಕಿ ನಾಮ ಹಾಕಿ ಜನರಿಗೆ ಚೊಂಬು ಕೊಡುತ್ತಿದ್ದಾರೆ.
ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಇತರ ನಾಯಕರು ಎತ್ತಿನ ಗಾಡಿಯಲ್ಲಿ ಬಂದರು. ಈ ಸಂದರ್ಭದಲ್ಲಿ ಸರ್ಕಾರದ ಅಣುಕು ಶವಯಾತ್ರೆಯನ್ನೂ ನಡೆಸಿದರು
(ಪ್ರಜಾವಾಣಿ ಚಿತ್ರ-Photo By/ Krishnakumar P S)
ಎಲ್ಲರ ಖಾತೆಗಳಿಗೂ ವರ್ಷಕ್ಕೆ ₹1 ಲಕ್ಷ ತಿಂಗಳಿಗೆ ₹2 ಸಾವಿರ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಒಂದು ಹೆಜ್ಜೆ ಮುಂದೆ ಹೋಗಿದ್ದ ರಾಹುಲ್ಗಾಂಧಿ ಟಕಾಟಕ್ ಹಾಕುತ್ತೇವೆ ಎಂದಿದ್ದರು. ಈಗ ಜೇಬಿಗೆ ಟಕಾಟಕ್ ಕತ್ತರಿ ಹಾಕಿದ್ದಾರೆ.