<p><strong>ಬೆಂಗಳೂರು</strong>: ರಾಜ್ಯ ಸರ್ಕಾರ ಬಡ, ಮಧ್ಯಮ ವರ್ಗದವರ ಮೇಲೆ ಬೆಲೆ ಏರಿಕೆಯ ಬರೆಯನ್ನು ಹಾಕಿದ್ದು, ಅದನ್ನು ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆ ಮತ್ತು ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಏ.2 ರ ಬೆಳಿಗ್ಗೆ 11 ರಿಂದ ಅಹೋರಾತ್ರಿ ಧರಣಿ ಆರಂಭಿಸಲಿದ್ದೇವೆ. ಈ ಧರಣಿಯಲ್ಲಿ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗವಹಿಸುತ್ತಾರೆ’ ಎಂದು ಹೇಳಿದರು.</p>.<p>ಬಿಜೆಪಿಯ ಶಾಸಕರ ಅಮಾನತು ಕ್ರಮ ಖಂಡಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟಿಸುತ್ತೇವೆ. ಅಲ್ಲದೇ, ಏ. 5 ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಮತ್ತು ಮಂಡಲ ಮಟ್ಟದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಲಿದ್ದಾರೆ’ ಎಂದು ತಿಳಿಸಿದರು.</p>.<p>7 ರಿಂದ ಜನಜಾಗೃತಿ ಹೋರಾಟ: ಏ.7 ರಂದು ಮೈಸೂರಿನಿಂದ ಜನಜಾಗೃತಿಗಾಗಿ ‘ಜನಾಕ್ರೋಶ’ ಹೋರಾಟ ಆರಂಭವಾಗಲಿದೆ. ಅಂದು ಮಧ್ಯಾಹ್ನ 3ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. 7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, 8 ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನ, 9 ರಂದು ಕೊಡಗು ಮತ್ತು ಮಂಗಳೂರು, 10 ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಹೋರಾಟ ನಡೆಯಲಿದೆ ಎಂದು ವಿಜಯೇಂದ್ರ ವಿವರಿಸಿದರು.</p>.<p>‘ಇದು ಮೊದಲ ಹಂತದ ಹೋರಾಟ. ಈ ಕುರಿತು ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಜತೆ ಚರ್ಚಿಸಿದ್ದೇನೆ. 2ನೇ ಹಂತದ ಹೋರಾಟ ಏ.13ರಿಂದ ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ. ಪ್ರತಿ ಜಿಲ್ಲಾಕೇಂದ್ರದಲ್ಲಿ 2 ರಿಂದ 3 ಕಿ.ಮೀ ಪಾದಯಾತ್ರೆ ನಡೆಸಿ, ಆ ಬಳಿಕ ಸಾರ್ವಜನಿಕ ಸಭೆ ನಡೆಸಲಾಗುವುದು. ಪಕ್ಷದ ಮುಖಂಡರು ಭಾಗವಹಿಸುತ್ತಾರೆ’ ಎಂದರು.</p>.<div><blockquote> ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾಗಿದೆ. ಇದಕ್ಕೆ ಕಾಂಗ್ರೆಸ್ ಕಾರಣ. ಸೇವಿಸುವ ಗಾಳಿ ಬಿಟ್ಟು ಉಳಿದೆಲ್ಲವುಗಳ ದರ ಏರಿಸಲಾಗಿದೆ </blockquote><span class="attribution">ಬಿ.ವೈ.ವಿಜಯೇಂದ್ರ ಅಧ್ಯಕ್ಷ ರಾಜ್ಯ ಬಿಜೆಪಿ</span></div>. <p> <strong>‘ಹಿಂದೂಗಳು ಏನು ತಪ್ಪು ಮಾಡಿದ್ದಾರೆ’</strong> </p><p>ರಾಜ್ಯ ಬಜೆಟ್ ಮೂಲಕ ಅಲ್ಪಸಂಖ್ಯಾತರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ. ಉನ್ನತ ಶಿಕ್ಷಣಕ್ಕೆ ವಿದೇಶಗಳಿಗೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ತಲಾ ₹20 ಲಕ್ಷ ಇದ್ದದ್ದನ್ನು ₹30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂಗಳಲ್ಲಿನ ಹಿಂದುಳಿದ ಸಮುದಾಯಕ್ಕೆ ಸೇರಿದವರು ಯಾವ ತಪ್ಪು ಮಾಡಿದ್ದಾರೆ. ಅವರಿಗೆ ಈ ಸೌಲಭ್ಯ ಏಕಿಲ್ಲ? ಮುಸ್ಲಿಂ ಹೆಣ್ಣು ಮಕ್ಕಳ ಆತ್ಮರಕ್ಷಣೆ ತರಬೇತಿಗೆ ನೂರಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಹಿಂದೂಗಳ ಹೆಣ್ಣು ಮಕ್ಕಳಿಗೆ ತರಬೇತಿ ಏಕಿಲ್ಲ? ಅವರೇನು ತಪ್ಪು ಮಾಡಿದ್ದಾರೆ’ ಎಂದು ವಿಜಯೇಂದ್ರ ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರ ಬಡ, ಮಧ್ಯಮ ವರ್ಗದವರ ಮೇಲೆ ಬೆಲೆ ಏರಿಕೆಯ ಬರೆಯನ್ನು ಹಾಕಿದ್ದು, ಅದನ್ನು ವಿರೋಧಿಸಿ ಸರ್ಕಾರದ ವಿರುದ್ಧ ರಾಜ್ಯ ವ್ಯಾಪಿ ಸರಣಿ ಪ್ರತಿಭಟನೆ ಮತ್ತು ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಏ.2 ರ ಬೆಳಿಗ್ಗೆ 11 ರಿಂದ ಅಹೋರಾತ್ರಿ ಧರಣಿ ಆರಂಭಿಸಲಿದ್ದೇವೆ. ಈ ಧರಣಿಯಲ್ಲಿ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗವಹಿಸುತ್ತಾರೆ’ ಎಂದು ಹೇಳಿದರು.</p>.<p>ಬಿಜೆಪಿಯ ಶಾಸಕರ ಅಮಾನತು ಕ್ರಮ ಖಂಡಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟಿಸುತ್ತೇವೆ. ಅಲ್ಲದೇ, ಏ. 5 ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಮತ್ತು ಮಂಡಲ ಮಟ್ಟದಲ್ಲಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಲಿದ್ದಾರೆ’ ಎಂದು ತಿಳಿಸಿದರು.</p>.<p>7 ರಿಂದ ಜನಜಾಗೃತಿ ಹೋರಾಟ: ಏ.7 ರಂದು ಮೈಸೂರಿನಿಂದ ಜನಜಾಗೃತಿಗಾಗಿ ‘ಜನಾಕ್ರೋಶ’ ಹೋರಾಟ ಆರಂಭವಾಗಲಿದೆ. ಅಂದು ಮಧ್ಯಾಹ್ನ 3ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ. 7ರಂದು ಮೈಸೂರು, ಚಾಮರಾಜನಗರ ಜಿಲ್ಲೆ, 8 ರಂದು ಬೆಳಿಗ್ಗೆ ಮಂಡ್ಯ, ಮಧ್ಯಾಹ್ನ ಹಾಸನ, 9 ರಂದು ಕೊಡಗು ಮತ್ತು ಮಂಗಳೂರು, 10 ರಂದು ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಹೋರಾಟ ನಡೆಯಲಿದೆ ಎಂದು ವಿಜಯೇಂದ್ರ ವಿವರಿಸಿದರು.</p>.<p>‘ಇದು ಮೊದಲ ಹಂತದ ಹೋರಾಟ. ಈ ಕುರಿತು ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ ಜತೆ ಚರ್ಚಿಸಿದ್ದೇನೆ. 2ನೇ ಹಂತದ ಹೋರಾಟ ಏ.13ರಿಂದ ಶಿವಮೊಗ್ಗ, ಉತ್ತರಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ. ಪ್ರತಿ ಜಿಲ್ಲಾಕೇಂದ್ರದಲ್ಲಿ 2 ರಿಂದ 3 ಕಿ.ಮೀ ಪಾದಯಾತ್ರೆ ನಡೆಸಿ, ಆ ಬಳಿಕ ಸಾರ್ವಜನಿಕ ಸಭೆ ನಡೆಸಲಾಗುವುದು. ಪಕ್ಷದ ಮುಖಂಡರು ಭಾಗವಹಿಸುತ್ತಾರೆ’ ಎಂದರು.</p>.<div><blockquote> ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾಗಿದೆ. ಇದಕ್ಕೆ ಕಾಂಗ್ರೆಸ್ ಕಾರಣ. ಸೇವಿಸುವ ಗಾಳಿ ಬಿಟ್ಟು ಉಳಿದೆಲ್ಲವುಗಳ ದರ ಏರಿಸಲಾಗಿದೆ </blockquote><span class="attribution">ಬಿ.ವೈ.ವಿಜಯೇಂದ್ರ ಅಧ್ಯಕ್ಷ ರಾಜ್ಯ ಬಿಜೆಪಿ</span></div>. <p> <strong>‘ಹಿಂದೂಗಳು ಏನು ತಪ್ಪು ಮಾಡಿದ್ದಾರೆ’</strong> </p><p>ರಾಜ್ಯ ಬಜೆಟ್ ಮೂಲಕ ಅಲ್ಪಸಂಖ್ಯಾತರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಿದ್ದಾರೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡಿರುವುದು ಕಾನೂನಿಗೆ ವಿರುದ್ಧವಾಗಿದೆ. ಉನ್ನತ ಶಿಕ್ಷಣಕ್ಕೆ ವಿದೇಶಗಳಿಗೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ತಲಾ ₹20 ಲಕ್ಷ ಇದ್ದದ್ದನ್ನು ₹30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೂಗಳಲ್ಲಿನ ಹಿಂದುಳಿದ ಸಮುದಾಯಕ್ಕೆ ಸೇರಿದವರು ಯಾವ ತಪ್ಪು ಮಾಡಿದ್ದಾರೆ. ಅವರಿಗೆ ಈ ಸೌಲಭ್ಯ ಏಕಿಲ್ಲ? ಮುಸ್ಲಿಂ ಹೆಣ್ಣು ಮಕ್ಕಳ ಆತ್ಮರಕ್ಷಣೆ ತರಬೇತಿಗೆ ನೂರಾರು ಕೋಟಿ ಖರ್ಚು ಮಾಡುತ್ತಿದ್ದಾರೆ. ಹಿಂದೂಗಳ ಹೆಣ್ಣು ಮಕ್ಕಳಿಗೆ ತರಬೇತಿ ಏಕಿಲ್ಲ? ಅವರೇನು ತಪ್ಪು ಮಾಡಿದ್ದಾರೆ’ ಎಂದು ವಿಜಯೇಂದ್ರ ಪ್ರಶ್ನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>