<p><strong>ಬೆಂಗಳೂರು</strong>: ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ವಿರುದ್ದ ಇಂದು(ಬುಧವಾರ) ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಪ್ರತಿಭಟನೆ ನಡೆಯಿತು.</p><p>ನಂತರ ಸ್ಪೀಕರ್ ಯು.ಟಿ.ಖಾದರ್ ಅವರ ಕಛೇರಿಗೆ ತೆರಳಿದ ಪ್ರತಿಭಟನಾಕಾರರು ಅಮಾನತು ಆದೇಶ ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದ್ದಾರೆ. ಸಂವಿಧಾನಬಾಹಿರವಾಗಿ ಶಾಸಕರನ್ನು ಅಮಾನತು ಮಾಡಿದ್ದಕ್ಕಾಗಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದ್ದಾರೆ.</p><p>ಶಾಸಕರ ಅಮಾನತು ಆದೇಶ ಹಿಂಪೆಡಯುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಲು ಕಾನೂನು ಬದ್ಧವಾಗಿ ಅವರಿಗಿರುವ ಸಂವಿಧಾನಾತ್ಮಕ ಜವಾಬ್ದಾರಿ ಮತ್ತು ಅಧಿಕಾರವನ್ನು ಕೂಡಲೇ ವಾಪಾಸ್ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.</p><p>ಅಲ್ಲದೇ, ‘ಮಧುಬಲೆ’ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ವಿರುದ್ದ ಇಂದು(ಬುಧವಾರ) ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಪ್ರತಿಭಟನೆ ನಡೆಯಿತು.</p><p>ನಂತರ ಸ್ಪೀಕರ್ ಯು.ಟಿ.ಖಾದರ್ ಅವರ ಕಛೇರಿಗೆ ತೆರಳಿದ ಪ್ರತಿಭಟನಾಕಾರರು ಅಮಾನತು ಆದೇಶ ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದ್ದಾರೆ. ಸಂವಿಧಾನಬಾಹಿರವಾಗಿ ಶಾಸಕರನ್ನು ಅಮಾನತು ಮಾಡಿದ್ದಕ್ಕಾಗಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದ್ದಾರೆ.</p><p>ಶಾಸಕರ ಅಮಾನತು ಆದೇಶ ಹಿಂಪೆಡಯುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಲು ಕಾನೂನು ಬದ್ಧವಾಗಿ ಅವರಿಗಿರುವ ಸಂವಿಧಾನಾತ್ಮಕ ಜವಾಬ್ದಾರಿ ಮತ್ತು ಅಧಿಕಾರವನ್ನು ಕೂಡಲೇ ವಾಪಾಸ್ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.</p><p>ಅಲ್ಲದೇ, ‘ಮಧುಬಲೆ’ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>