<p><strong>ಬೆಂಗಳೂರು:</strong> ಸಿದ್ದರಾಮಯ್ಯನವರೇ, ಯಾವ ಸಾಧನೆ ಮಾಡಿದ್ದೀರಿ ಎಂದು ಈ ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ.</p>.<p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕುರ್ಚಿ ಗ್ಯಾರಂಟಿ ಇಲ್ಲದ ಲಾಟರಿ ಸಿಎಂ ಸಿದ್ದರಾಮಯ್ಯ ಅವರಿಂದ ಕುರ್ಚಿ ಉಳಿಸಿಕೊಳ್ಳಲು ಸಾಧನಾ ಸಮಾವೇಶ ಎಂಬ ಮತ್ತೊಂದು ಹಗಲುವೇಷ! ಎಂದು ಕೂಹಕವಾಡಿದ್ದಾರೆ. ಅಲ್ಲದೇ ಪೋಸ್ಟ್ನಲ್ಲಿ ಸರಣಿ ಪ್ರಶ್ನೆಗಳನ್ನೂ ಕೇಳಿದ್ದಾರೆ.</p>.ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶ: ಸಾಧನೆ, ‘ಶಕ್ತಿ ಪ್ರದರ್ಶನ‘ಕ್ಕೆ ಸಜ್ಜು.<ul><li><p>ಹಾಲು, ನೀರು, ಕರೆಂಟು, ಪೆಟ್ರೋಲ್, ಡೀಸೆಲ್, ಆಸ್ತಿ ತೆರಿಗೆ, ಹೀಗೆ ಎಲ್ಲ ದಿನಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಬಡವರು ಮಧ್ಯಮ ವರ್ಗದ ಜೇಬಿಗೆ ಕತ್ತರಿ ಹಾಕಿದ್ದಕ್ಕೆ ಈ ಸಮಾವೇಶನಾ?</p></li><li><p>ಪರಿಶಿಷ್ಟ ಸಮುದಾಯಗಳಿಗೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಹೊಡೆದಿರುವ ಖುಷಿಗೆ ಸಮಾವೇಶನಾ?</p></li><li><p>ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ನಾಮಕಾವಸ್ತೆ ತನಿಖೆ ಮಾಡಿಸಿ ಬಿ-ರಿಪೋರ್ಟ್ ಹಾಕಿಸಿಕೊಂಡು ಕ್ಲೀನ್ ಚಿಟ್ ಪಡೆದ ಸಾಧನೆಗೆ ಈ ಸಮಾವೇಶನಾ?</p></li><li><p>ಕಾಂಗ್ರೆಸ್ ಸರ್ಕಾರದ ಕಿರುಕುಳ, ಕಮಿಷನ್ ದಾಹಕ್ಕೆ ಬಲಿಯಾದ ಪ್ರಾಮಾಣಿಕ ಅಧಿಕಾರಿಗಳು ಹಾಗು ಗುತ್ತಿಗೆದಾರರ ಸಾವನ್ನು ಸಂಭ್ರಮಿಸಲು ಸಮಾವೇಶನಾ? </p></li><li><p>ಕಳಪೆ ಔಷಧಿ ಪೂರೈಕೆಯಿಂದ 460ಕ್ಕೂ ಹೆಚ್ಚು ಬಾಣಂತಿಯರು ಆಸ್ಪತ್ರೆಯಲ್ಲೇ ತೀರಿಕೊಂಡರಲ್ಲ ಅದಕ್ಕೆ ಸಮಾವೇಶನಾ?</p></li><li><p>ಕಳೆದ 24 ತಿಂಗಳಲ್ಲಿ 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರಲ್ಲ ಅದಕ್ಕೆ ಸಮಾವೇಶನಾ?</p></li><li><p>ವಕ್ಫ್ ಮಂಡಳಿ ಹೆಸರಿನಲ್ಲಿ ಮಠ, ಮಂದಿರಗಳು, ರೈತರ ಜಮೀನು ಕಬಳಿಸಿದ ಸಾಧನೆಗೆ ಸಮಾವೇಶನಾ?</p></li><li><p>ಕೆಪಿಎಸ್ಸಿ ಪರೀಕ್ಷೆಯಲ್ಲಿ ಎಡವಟ್ಟುಗಳು ಮೇಲೆ ಎಡವಟ್ಟುಗಳು ಮಾಡಿ ಲಕ್ಷಾಂತರ ಯುವಕರ ಕನಸು ನುಚ್ಚು ನೂರು ಮಾಡಿ ಅವರ ಭವಿಷ್ಯ ಹಾಳು ಮಾಡಿದ್ದಕ್ಕೆ ಸಮಾವೇಶನಾ?</p></li><li><p>ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕಾರಣದಿಂದ ನೇಹಾ ಕೊಲೆ ಪ್ರಕರಣದಿಂದ ಹಿಡಿದು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದವರೆಗೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಹಿಂದೂಗಳ ಸರಣಿ ಕೊಲೆ ಬಗ್ಗೆ ಸಮಾವೇಶನಾ?</p></li><li><p>ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ್ದಕ್ಕೆ ಸಮಾವೇಶನಾ? </p></li><li><p>ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದು ಹೇಳಿ ಪಾಕಿಸ್ತಾನದ ಟಿವಿಗಳಲ್ಲಿ ಮಿಂಚಿದ್ದಕ್ಕೆ ಈ ಸಮಾವೇಶನಾ?</p></li><li><p>ಕಂಟ್ರಾಕ್ಟರ್ಗಳು ಈ ಸರ್ಕಾರ 80% ಕಮಿಷನ್ ತಿನ್ನುತ್ತಿದೆ ಎಂದು ಆರೋಪ ಮಾಡಿರುವುದಕ್ಕೆ ಸಮಾವೇಶನಾ?</p></li><li><p>ಕರ್ನಾಟಕ ರಾಜ್ಯದ ಜನತೆ ಮೇಲೆ 3.15 ಲಕ್ಷ ಕೋಟಿ ಸಾಲದ ಹೊರೆ ಹೊರಿಸಲಾಗಿದೆ ಅದಕ್ಕೆ ಸಮಾವೇಶನಾ?</p></li><li><p> ನಿಮ್ಮ ಪ್ರಚಾರದ ತೆವಲಿಗೆ ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಾಯಕ ಯುವಕರು ಜೀವ ಕಳೆದುಕೊಂಡರಲ್ಲ ಅದಕ್ಕಾ ಈ ಸಮಾವೇಶ?</p></li><li><p> ಎರಡು ವರ್ಷದಿಂದ ಒಂದೇ ಒಂದು ಹೊಸ ಅಭಿವೃದ್ಧಿ ಕಾಮಗಾರಿಗೂ ಶಂಕುಸ್ಥಾಪನೆ ಮಾಡಿಲ್ಲ ಎನ್ನುವ ಸಾಧನೆಗೆ ಸಮಾವೇಶನಾ?</p></li><li><p>ಹೂಡಿಕೆದಾರರು, ಉದ್ಯಮಿಗಳು ಕರ್ನಾಟಕದಿಂದ ವಿಮುಖರಾಗುತ್ತಿದ್ದಾರೆ ಎನ್ನುವ ಸಂಭ್ರಮಕ್ಕೆ ಈ ಸಮಾವೇಶನಾ ಎಂದು ಪ್ರಶ್ನಿಸಿದ್ದಾರೆ</p></li></ul> .<p>ಹೈಕಮಾಂಡ್ ವಿಶ್ವಾಸ ಕಳೆದುಕೊಂಡಿದ್ದರೂ, ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುತ್ತಿದ್ದರೂ, ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದಿರುವ ಜನಾಕ್ರೋಶವನ್ನ ಅಣಕಿಸುವ ರೀತಿಯಲ್ಲಿ ಸಮಾವೇಶ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯನವರ ಭಂಡತನವನ್ನ ನಿಜಕ್ಕೂ ಮೆಚ್ಚಲೇಬೇಕು ಎಂದಿದ್ದಾರೆ.</p> .ಕಾಂಗ್ರೆಸ್ ಸಮಾವೇಶ | ಚರ್ಚೆಗೆ ಬನ್ನಿ; ಪ್ರತಿಪಕ್ಷಗಳಿಗೆ ಸಿದ್ದರಾಮಯ್ಯ ಸವಾಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಿದ್ದರಾಮಯ್ಯನವರೇ, ಯಾವ ಸಾಧನೆ ಮಾಡಿದ್ದೀರಿ ಎಂದು ಈ ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ.</p>.<p>ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕುರ್ಚಿ ಗ್ಯಾರಂಟಿ ಇಲ್ಲದ ಲಾಟರಿ ಸಿಎಂ ಸಿದ್ದರಾಮಯ್ಯ ಅವರಿಂದ ಕುರ್ಚಿ ಉಳಿಸಿಕೊಳ್ಳಲು ಸಾಧನಾ ಸಮಾವೇಶ ಎಂಬ ಮತ್ತೊಂದು ಹಗಲುವೇಷ! ಎಂದು ಕೂಹಕವಾಡಿದ್ದಾರೆ. ಅಲ್ಲದೇ ಪೋಸ್ಟ್ನಲ್ಲಿ ಸರಣಿ ಪ್ರಶ್ನೆಗಳನ್ನೂ ಕೇಳಿದ್ದಾರೆ.</p>.ರಾಜ್ಯ ಸರ್ಕಾರದ 2 ವರ್ಷಗಳ ಸಾಧನಾ ಸಮಾವೇಶ: ಸಾಧನೆ, ‘ಶಕ್ತಿ ಪ್ರದರ್ಶನ‘ಕ್ಕೆ ಸಜ್ಜು.<ul><li><p>ಹಾಲು, ನೀರು, ಕರೆಂಟು, ಪೆಟ್ರೋಲ್, ಡೀಸೆಲ್, ಆಸ್ತಿ ತೆರಿಗೆ, ಹೀಗೆ ಎಲ್ಲ ದಿನಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಬಡವರು ಮಧ್ಯಮ ವರ್ಗದ ಜೇಬಿಗೆ ಕತ್ತರಿ ಹಾಕಿದ್ದಕ್ಕೆ ಈ ಸಮಾವೇಶನಾ?</p></li><li><p>ಪರಿಶಿಷ್ಟ ಸಮುದಾಯಗಳಿಗೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನ ಲೂಟಿ ಹೊಡೆದಿರುವ ಖುಷಿಗೆ ಸಮಾವೇಶನಾ?</p></li><li><p>ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ನಾಮಕಾವಸ್ತೆ ತನಿಖೆ ಮಾಡಿಸಿ ಬಿ-ರಿಪೋರ್ಟ್ ಹಾಕಿಸಿಕೊಂಡು ಕ್ಲೀನ್ ಚಿಟ್ ಪಡೆದ ಸಾಧನೆಗೆ ಈ ಸಮಾವೇಶನಾ?</p></li><li><p>ಕಾಂಗ್ರೆಸ್ ಸರ್ಕಾರದ ಕಿರುಕುಳ, ಕಮಿಷನ್ ದಾಹಕ್ಕೆ ಬಲಿಯಾದ ಪ್ರಾಮಾಣಿಕ ಅಧಿಕಾರಿಗಳು ಹಾಗು ಗುತ್ತಿಗೆದಾರರ ಸಾವನ್ನು ಸಂಭ್ರಮಿಸಲು ಸಮಾವೇಶನಾ? </p></li><li><p>ಕಳಪೆ ಔಷಧಿ ಪೂರೈಕೆಯಿಂದ 460ಕ್ಕೂ ಹೆಚ್ಚು ಬಾಣಂತಿಯರು ಆಸ್ಪತ್ರೆಯಲ್ಲೇ ತೀರಿಕೊಂಡರಲ್ಲ ಅದಕ್ಕೆ ಸಮಾವೇಶನಾ?</p></li><li><p>ಕಳೆದ 24 ತಿಂಗಳಲ್ಲಿ 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರಲ್ಲ ಅದಕ್ಕೆ ಸಮಾವೇಶನಾ?</p></li><li><p>ವಕ್ಫ್ ಮಂಡಳಿ ಹೆಸರಿನಲ್ಲಿ ಮಠ, ಮಂದಿರಗಳು, ರೈತರ ಜಮೀನು ಕಬಳಿಸಿದ ಸಾಧನೆಗೆ ಸಮಾವೇಶನಾ?</p></li><li><p>ಕೆಪಿಎಸ್ಸಿ ಪರೀಕ್ಷೆಯಲ್ಲಿ ಎಡವಟ್ಟುಗಳು ಮೇಲೆ ಎಡವಟ್ಟುಗಳು ಮಾಡಿ ಲಕ್ಷಾಂತರ ಯುವಕರ ಕನಸು ನುಚ್ಚು ನೂರು ಮಾಡಿ ಅವರ ಭವಿಷ್ಯ ಹಾಳು ಮಾಡಿದ್ದಕ್ಕೆ ಸಮಾವೇಶನಾ?</p></li><li><p>ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕಾರಣದಿಂದ ನೇಹಾ ಕೊಲೆ ಪ್ರಕರಣದಿಂದ ಹಿಡಿದು, ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದವರೆಗೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಹಿಂದೂಗಳ ಸರಣಿ ಕೊಲೆ ಬಗ್ಗೆ ಸಮಾವೇಶನಾ?</p></li><li><p>ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ್ದಕ್ಕೆ ಸಮಾವೇಶನಾ? </p></li><li><p>ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದು ಹೇಳಿ ಪಾಕಿಸ್ತಾನದ ಟಿವಿಗಳಲ್ಲಿ ಮಿಂಚಿದ್ದಕ್ಕೆ ಈ ಸಮಾವೇಶನಾ?</p></li><li><p>ಕಂಟ್ರಾಕ್ಟರ್ಗಳು ಈ ಸರ್ಕಾರ 80% ಕಮಿಷನ್ ತಿನ್ನುತ್ತಿದೆ ಎಂದು ಆರೋಪ ಮಾಡಿರುವುದಕ್ಕೆ ಸಮಾವೇಶನಾ?</p></li><li><p>ಕರ್ನಾಟಕ ರಾಜ್ಯದ ಜನತೆ ಮೇಲೆ 3.15 ಲಕ್ಷ ಕೋಟಿ ಸಾಲದ ಹೊರೆ ಹೊರಿಸಲಾಗಿದೆ ಅದಕ್ಕೆ ಸಮಾವೇಶನಾ?</p></li><li><p> ನಿಮ್ಮ ಪ್ರಚಾರದ ತೆವಲಿಗೆ ಐಪಿಎಲ್ ವಿಜಯೋತ್ಸವದಲ್ಲಿ 11 ಜನ ಅಮಾಯಕ ಯುವಕರು ಜೀವ ಕಳೆದುಕೊಂಡರಲ್ಲ ಅದಕ್ಕಾ ಈ ಸಮಾವೇಶ?</p></li><li><p> ಎರಡು ವರ್ಷದಿಂದ ಒಂದೇ ಒಂದು ಹೊಸ ಅಭಿವೃದ್ಧಿ ಕಾಮಗಾರಿಗೂ ಶಂಕುಸ್ಥಾಪನೆ ಮಾಡಿಲ್ಲ ಎನ್ನುವ ಸಾಧನೆಗೆ ಸಮಾವೇಶನಾ?</p></li><li><p>ಹೂಡಿಕೆದಾರರು, ಉದ್ಯಮಿಗಳು ಕರ್ನಾಟಕದಿಂದ ವಿಮುಖರಾಗುತ್ತಿದ್ದಾರೆ ಎನ್ನುವ ಸಂಭ್ರಮಕ್ಕೆ ಈ ಸಮಾವೇಶನಾ ಎಂದು ಪ್ರಶ್ನಿಸಿದ್ದಾರೆ</p></li></ul> .<p>ಹೈಕಮಾಂಡ್ ವಿಶ್ವಾಸ ಕಳೆದುಕೊಂಡಿದ್ದರೂ, ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುತ್ತಿದ್ದರೂ, ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಭುಗಿಲೆದ್ದಿರುವ ಜನಾಕ್ರೋಶವನ್ನ ಅಣಕಿಸುವ ರೀತಿಯಲ್ಲಿ ಸಮಾವೇಶ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯನವರ ಭಂಡತನವನ್ನ ನಿಜಕ್ಕೂ ಮೆಚ್ಚಲೇಬೇಕು ಎಂದಿದ್ದಾರೆ.</p> .ಕಾಂಗ್ರೆಸ್ ಸಮಾವೇಶ | ಚರ್ಚೆಗೆ ಬನ್ನಿ; ಪ್ರತಿಪಕ್ಷಗಳಿಗೆ ಸಿದ್ದರಾಮಯ್ಯ ಸವಾಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>