<p><strong>ಬೆಂಗಳೂರು</strong>: ಕಾಂಗ್ರೆಸ್ ನಾಯಕರಾದ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಂಚ ರಾಜ್ಯ ಚುನಾವಣೆಗೆ ಹಣ ಸಂಗ್ರಹಕ್ಕೆ ಗುರಿ ನಿಗದಿ ಮಾಡಲು ಬಂದಿದ್ದಾರೆಯೇ ಎಂದು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಪ್ರಶ್ನಿಸಿದ್ದಾರೆ.</p>.<p>ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆಯೂ ಇವರಿಬ್ಬರು ಬಂದು ಹೋದ ಕೆಲವೇ ದಿನಗಳ ಬಳಿಕ ಗುತ್ತಿಗೆದಾರರ ಮನೆಗಳಲ್ಲಿ ₹102 ಕೋಟಿ ಸಿಕ್ಕಿತ್ತು. ಅದು ಕಾಂಗ್ರೆಸ್ ಪಕ್ಷವೇ ಸಂಗ್ರಹಿಸಿದ ಹಣ ಆಗಿತ್ತು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಪಾತ್ರ ಅದರಲ್ಲಿದೆ ಎಂದು ಆರೋಪಿಸಿದರು.</p>.<p>ಹಣ ಇಟ್ಟುಕೊಂಡ ಆರೋಪಿಗಳು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಹತ್ತಿರದವರು. ಪಂಚ ರಾಜ್ಯಗಳ ಚುನಾವಣೆಗೆ ಬಳಸಿಕೊಳ್ಳಲು ಹಣ ಸಂಗ್ರಹಿಸಿಡಲಾಗಿತ್ತು ಎಂಬುದು ಬಹಿರಂಗವಾಗಿದೆ. ಆದ ಕಾರಣ ಇಬ್ಬರೂ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಚಿವ ಸ್ಥಾನ ಸಿಗದೇ ಬೇಸರ ವ್ಯಕ್ತಪಡಿಸುವವರನ್ನು ಸಮಾಧಾನಪಡಿಸಲು ನಿಗಮ–ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲು ಬಂದಿದ್ದಾರೆ. ಬಹುಶಃ ನಿಗಮ ಮಂಡಳಿಗಳ ಅಧ್ಯಕ್ಷರಿಗೂ ಗುರಿ ನಿಗದಿ ಮಾಡುವುದು ಇವರ ಭೇಟಿ ಉದ್ದೇಶ ಆಗಿರಬಹುದು ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಂಗ್ರೆಸ್ ನಾಯಕರಾದ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಂಚ ರಾಜ್ಯ ಚುನಾವಣೆಗೆ ಹಣ ಸಂಗ್ರಹಕ್ಕೆ ಗುರಿ ನಿಗದಿ ಮಾಡಲು ಬಂದಿದ್ದಾರೆಯೇ ಎಂದು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಪ್ರಶ್ನಿಸಿದ್ದಾರೆ.</p>.<p>ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆಯೂ ಇವರಿಬ್ಬರು ಬಂದು ಹೋದ ಕೆಲವೇ ದಿನಗಳ ಬಳಿಕ ಗುತ್ತಿಗೆದಾರರ ಮನೆಗಳಲ್ಲಿ ₹102 ಕೋಟಿ ಸಿಕ್ಕಿತ್ತು. ಅದು ಕಾಂಗ್ರೆಸ್ ಪಕ್ಷವೇ ಸಂಗ್ರಹಿಸಿದ ಹಣ ಆಗಿತ್ತು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಪಾತ್ರ ಅದರಲ್ಲಿದೆ ಎಂದು ಆರೋಪಿಸಿದರು.</p>.<p>ಹಣ ಇಟ್ಟುಕೊಂಡ ಆರೋಪಿಗಳು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಹತ್ತಿರದವರು. ಪಂಚ ರಾಜ್ಯಗಳ ಚುನಾವಣೆಗೆ ಬಳಸಿಕೊಳ್ಳಲು ಹಣ ಸಂಗ್ರಹಿಸಿಡಲಾಗಿತ್ತು ಎಂಬುದು ಬಹಿರಂಗವಾಗಿದೆ. ಆದ ಕಾರಣ ಇಬ್ಬರೂ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಸಚಿವ ಸ್ಥಾನ ಸಿಗದೇ ಬೇಸರ ವ್ಯಕ್ತಪಡಿಸುವವರನ್ನು ಸಮಾಧಾನಪಡಿಸಲು ನಿಗಮ–ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲು ಬಂದಿದ್ದಾರೆ. ಬಹುಶಃ ನಿಗಮ ಮಂಡಳಿಗಳ ಅಧ್ಯಕ್ಷರಿಗೂ ಗುರಿ ನಿಗದಿ ಮಾಡುವುದು ಇವರ ಭೇಟಿ ಉದ್ದೇಶ ಆಗಿರಬಹುದು ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>