<p><strong>ಬೆಂಗಳೂರು</strong>: ‘ಒಳಮೀಸಲಾತಿಗೆ ಒತ್ತಾಯಿಸಿ 16ರಂದು ಬೆಳಗಾವಿಯಲ್ಲಿ ಮಾದಿಗ ಸಂಘಟನೆಯ ಸಮಾವೇಶ ನಡೆಸುತ್ತೇವೆ’ ಎಂದು ಮಾಜಿ ಕೇಂದ್ರ ಸಚಿವ ಆನೇಕಲ್ ನಾರಾಯಣಸ್ವಾಮಿ ತಿಳಿಸಿದರು.</p>.<p>ಒಳಮೀಸಲಾತಿಗೆ ಸಂಬಂಧಿಸಿದಂತೆ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಲವು ಸಂಘಟನೆಗಳು ಭಾಗಿಯಾಗಲಿವೆ’ ಎಂದರು.</p>.<p>‘ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹೋರಾಟಕ್ಕೆ ಬೆಂಬಲ ಯಾಚಿಸಿ ಮತ್ತು ಸಮಾವೇಶಕ್ಕೆ ಬರುವಂತೆ ಆಗ್ರಹಿಸಿ ಎಲ್ಲ ಸಚಿವರು ಮತ್ತು ಎಲ್ಲ ಪಕ್ಷದ ಶಾಸಕರ ಮನೆಗಳ ಮುಂದೆ ಇದೇ 14ರಂದು ತಮಟೆ ಚಳವಳಿ ನಡೆಸಲಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಎ.ನಾರಾಯಣಸ್ವಾಮಿ, ಶಾಸಕ ಮಾನಪ್ಪ ವಜ್ಜಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪರಿಶಿಷ್ಟ ಜಾತಿಗಳ ಮೋರ್ಚಾ ಉಪಾಧ್ಯಕ್ಷ ಮಂಜುನಾಥ್ ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಒಳಮೀಸಲಾತಿಗೆ ಒತ್ತಾಯಿಸಿ 16ರಂದು ಬೆಳಗಾವಿಯಲ್ಲಿ ಮಾದಿಗ ಸಂಘಟನೆಯ ಸಮಾವೇಶ ನಡೆಸುತ್ತೇವೆ’ ಎಂದು ಮಾಜಿ ಕೇಂದ್ರ ಸಚಿವ ಆನೇಕಲ್ ನಾರಾಯಣಸ್ವಾಮಿ ತಿಳಿಸಿದರು.</p>.<p>ಒಳಮೀಸಲಾತಿಗೆ ಸಂಬಂಧಿಸಿದಂತೆ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಲವು ಸಂಘಟನೆಗಳು ಭಾಗಿಯಾಗಲಿವೆ’ ಎಂದರು.</p>.<p>‘ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಹೋರಾಟಕ್ಕೆ ಬೆಂಬಲ ಯಾಚಿಸಿ ಮತ್ತು ಸಮಾವೇಶಕ್ಕೆ ಬರುವಂತೆ ಆಗ್ರಹಿಸಿ ಎಲ್ಲ ಸಚಿವರು ಮತ್ತು ಎಲ್ಲ ಪಕ್ಷದ ಶಾಸಕರ ಮನೆಗಳ ಮುಂದೆ ಇದೇ 14ರಂದು ತಮಟೆ ಚಳವಳಿ ನಡೆಸಲಾಗುತ್ತದೆ’ ಎಂದು ಅವರು ತಿಳಿಸಿದರು.</p>.<p>ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಎ.ನಾರಾಯಣಸ್ವಾಮಿ, ಶಾಸಕ ಮಾನಪ್ಪ ವಜ್ಜಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪರಿಶಿಷ್ಟ ಜಾತಿಗಳ ಮೋರ್ಚಾ ಉಪಾಧ್ಯಕ್ಷ ಮಂಜುನಾಥ್ ಸಭೆಯಲ್ಲಿ ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>