<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ವಿರುದ್ಧ ಇದೇ 17 ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟ ಆಯೋಜಿಸಲಾಗಿದ್ದು, ಆ ಬಳಿಕ ಸರ್ಕಾರದ ವೈಫಲ್ಯಗಳ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಸರಣಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.</p>.<p>ಸಂಸದರಾದ ಜಗದೀಶ ಶೆಟ್ಟರ್ ಹಾಗೂ ಗೋವಿಂದ ಕಾರಜೋಳ ಅವರ ಜತೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ವಿವಿಧ ಭರವಸೆಗಳನ್ನು ನೀಡಿ ಒಂದೂ ಈಡೇರಿಸದೇ ಸರ್ಕಾರ ವಂಚನೆ ಮಾಡಿದೆ. ಇದನ್ನು ಖಂಡಿಸಿ ಬಾಗಲಕೋಟೆಯಲ್ಲಿ ಹೋರಾಟ ನಡೆಸಲಿದ್ದೇವೆ’ ಎಂದು ಹೇಳಿದರು.</p>.<p>‘ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಪಾವತಿ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸುಳ್ಳು ಮಾಹಿತಿ ನೀಡಿದ್ದರು. ಗೃಹಲಕ್ಷ್ಮಿ ಹಣದ ಪಾವತಿ ಮಾಡದೇ ಇರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಿದ್ದೇವೆ’ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿ ಏರಿಕೆಯಾಗಿದೆ. ಯುವಕರು ಇದಕ್ಕೆ ಬಲಿಯಾಗುತ್ತಿದ್ದಾರೆ. ಇದರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<div><blockquote>ದಲಿತ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ‘ಎಕ್ಸ್’ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶ್ರದ್ಧಾಂಜಲಿ ಸಂದೇಶ ಹಾಕಿದರೂ ಆತನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ</blockquote><span class="attribution">ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</span></div>.<p><strong>‘ವಿಬಿ ಜಿ ರಾಮ್ ಜಿ ವಿರುದ್ಧ ಷಡ್ಯಂತ್ರ’</strong> </p><p>ಬೆಂಗಳೂರು: ಗ್ರಾಮೀಣ ಜನರ ಸ್ನೇಹಿ ‘ವಿಬಿ ಜಿ ರಾಮ್ ಜಿ’ ಯೋಜನೆ ಕುರಿತು ಅಪಪ್ರಚಾರ ನಡೆಸಲು ಕಾಂಗ್ರೆಸ್ ಷಡ್ಯಂತ್ರ ನಡೆಸಿದೆ ಎಂದು ಬಿ.ವೈ.ವಿಜಯೇಂದ್ರ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿ ಚುನಾವಣೆ ಮುಂದೂಡಿ ನರೇಗಾ ವಿಷಯವನ್ನು ಕೈಗೆತ್ತಿಕೊಂಡಿದೆ. ರಾಹುಲ್ಗಾಂಧಿ ಸಿದ್ದರಾಮಯ್ಯ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರದ ವಿರುದ್ಧ ಇದೇ 17 ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟ ಆಯೋಜಿಸಲಾಗಿದ್ದು, ಆ ಬಳಿಕ ಸರ್ಕಾರದ ವೈಫಲ್ಯಗಳ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಸರಣಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.</p>.<p>ಸಂಸದರಾದ ಜಗದೀಶ ಶೆಟ್ಟರ್ ಹಾಗೂ ಗೋವಿಂದ ಕಾರಜೋಳ ಅವರ ಜತೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ವಿವಿಧ ಭರವಸೆಗಳನ್ನು ನೀಡಿ ಒಂದೂ ಈಡೇರಿಸದೇ ಸರ್ಕಾರ ವಂಚನೆ ಮಾಡಿದೆ. ಇದನ್ನು ಖಂಡಿಸಿ ಬಾಗಲಕೋಟೆಯಲ್ಲಿ ಹೋರಾಟ ನಡೆಸಲಿದ್ದೇವೆ’ ಎಂದು ಹೇಳಿದರು.</p>.<p>‘ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಪಾವತಿ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸುಳ್ಳು ಮಾಹಿತಿ ನೀಡಿದ್ದರು. ಗೃಹಲಕ್ಷ್ಮಿ ಹಣದ ಪಾವತಿ ಮಾಡದೇ ಇರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಿದ್ದೇವೆ’ ಎಂದು ಹೇಳಿದರು.</p>.<p>ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿ ಏರಿಕೆಯಾಗಿದೆ. ಯುವಕರು ಇದಕ್ಕೆ ಬಲಿಯಾಗುತ್ತಿದ್ದಾರೆ. ಇದರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<div><blockquote>ದಲಿತ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ‘ಎಕ್ಸ್’ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶ್ರದ್ಧಾಂಜಲಿ ಸಂದೇಶ ಹಾಕಿದರೂ ಆತನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ</blockquote><span class="attribution">ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</span></div>.<p><strong>‘ವಿಬಿ ಜಿ ರಾಮ್ ಜಿ ವಿರುದ್ಧ ಷಡ್ಯಂತ್ರ’</strong> </p><p>ಬೆಂಗಳೂರು: ಗ್ರಾಮೀಣ ಜನರ ಸ್ನೇಹಿ ‘ವಿಬಿ ಜಿ ರಾಮ್ ಜಿ’ ಯೋಜನೆ ಕುರಿತು ಅಪಪ್ರಚಾರ ನಡೆಸಲು ಕಾಂಗ್ರೆಸ್ ಷಡ್ಯಂತ್ರ ನಡೆಸಿದೆ ಎಂದು ಬಿ.ವೈ.ವಿಜಯೇಂದ್ರ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿ ಚುನಾವಣೆ ಮುಂದೂಡಿ ನರೇಗಾ ವಿಷಯವನ್ನು ಕೈಗೆತ್ತಿಕೊಂಡಿದೆ. ರಾಹುಲ್ಗಾಂಧಿ ಸಿದ್ದರಾಮಯ್ಯ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>