ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ತನ್ನೆಲ್ಲಾ ಖರ್ಚುಗಳ ಎಟಿಎಂ ಮಾಡಿಕೊಂಡಿದೆ ಎಂಬುದನ್ನು ಕಾಂಗ್ರೆಸ್ ಪದೇಪದೇ ಸಾಬೀತುಪಡಿಸುತ್ತಿದೆ ಎಂದು ಹೇಳಿದೆ.
ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರ ವಹಿಸಿದ ಮೊದಲ ವಾರದಲ್ಲೇ ಅಧಿಕಾರಿಗಳ ಜತೆ ಖಾಸಗಿಯಾಗಿ ಕಲೆಕ್ಷನ್ ಸಭೆ ನಡೆಸಿದ್ದ ಸುರ್ಜೇವಾಲ ಅವರು ಹಾಗೂ ವಿಶೇಷ ಕಲೆಕ್ಷನ್ ಪ್ರತಿನಿಧಿ ಕೆ.ಸಿ ವೇಣುಗೋಪ್ ಅವರು ಈಗ ತಿಂಗಳ ಕಲೆಕ್ಷನ್ ಎಣಿಸಲು ತಿಂಗಳ ಮೊದಲ ದಿನವೇ ಬೆಂಗಳೂರಿಗೆ ಬಂದಿದ್ದಾರೆ ಎಂದು ಬಿಜೆಪಿ ಬರೆದುಕೊಂಡಿದೆ.