<p><strong>ಬೆಂಗಳೂರು</strong>: ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು, 'ಬಡವರು ಎಂದು ಹೇಳ್ತಾರೆ, ಸರ್ಕಾರಿ ಆಸ್ಪತ್ರೆ ಬಿಟ್ಟು ಯಾಕೆ ಖಾಸಗಿ ಆಸ್ಪತ್ರೆಗೆ ಹೋಗ್ತಾರೆ?' ಎಂದು ಕೆಲವರನ್ನು ಕುಟುಕಿದ್ದರು.</p><p>ಇದೀಗ ಇದೇ ಹೇಳಿಕೆ ಇಟ್ಟುಕೊಂಡು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದೆ.</p><p>ಸಿಎಂ ಅವರೇ, ನಿಮ್ಮ ದುರಾಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗೆ ಹೋದರೆ ಬದುಕಿ ಬರುತ್ತೇವೆ ಎನ್ನುವ ಗ್ಯಾರಂಟಿ ಜನರಿಗಿಲ್ಲ ಎಂದು ಲೇವಡಿ ಮಾಡಿದೆ.</p><p>ವೈದ್ಯರು ಹಾಗೂ ಔಷಧಿಗಳ ಕೊರತೆ, ಸಿಬ್ಬಂದಿಗಳ ನಿರ್ಲಕ್ಷ್ಯ, ಮೂಲಭೂತ ಸೌಕರ್ಯಗಳ ನ್ಯೂನ್ಯತೆಯೇ ಬಡವರನ್ನು ಖಾಸಗಿ ಆಸ್ಪತ್ರೆಗಳತ್ತ ತಳ್ಳುತ್ತಿದೆ. ಸರ್ಕಾರಿ ಆಸ್ಪತ್ರೆಗಳ ಯೋಗ್ಯತೆ ಉತ್ತಮವಾಗಿದ್ದರೆ ಬಡವರು ತಮ್ಮ ಆಸ್ತಿ-ಪಾಸ್ತಿ ಮಾರಿ ಖಾಸಗಿ ಆಸ್ಪತ್ರೆಗೆ ಯಾಕೆ ಹೋಗುತ್ತಿದ್ದರು? ಎಂದು ಪ್ರಶ್ನಿಸಿದೆ.</p><p>ನಿಮ್ಮ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಡವರನ್ನೇ ಹೊಣೆ ಮಾಡುವುದು ಸರಿಯಲ್ಲ. ಮೊದಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಉದ್ಧಾರ ಮಾಡಿ, ಆಮೇಲೆ ಜನರಿಗೆ ಬುದ್ಧಿ ಹೇಳಿ ಎಂದು ತಿರುಗೇಟು ಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರು, 'ಬಡವರು ಎಂದು ಹೇಳ್ತಾರೆ, ಸರ್ಕಾರಿ ಆಸ್ಪತ್ರೆ ಬಿಟ್ಟು ಯಾಕೆ ಖಾಸಗಿ ಆಸ್ಪತ್ರೆಗೆ ಹೋಗ್ತಾರೆ?' ಎಂದು ಕೆಲವರನ್ನು ಕುಟುಕಿದ್ದರು.</p><p>ಇದೀಗ ಇದೇ ಹೇಳಿಕೆ ಇಟ್ಟುಕೊಂಡು ರಾಜ್ಯ ಬಿಜೆಪಿ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿದೆ.</p><p>ಸಿಎಂ ಅವರೇ, ನಿಮ್ಮ ದುರಾಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗೆ ಹೋದರೆ ಬದುಕಿ ಬರುತ್ತೇವೆ ಎನ್ನುವ ಗ್ಯಾರಂಟಿ ಜನರಿಗಿಲ್ಲ ಎಂದು ಲೇವಡಿ ಮಾಡಿದೆ.</p><p>ವೈದ್ಯರು ಹಾಗೂ ಔಷಧಿಗಳ ಕೊರತೆ, ಸಿಬ್ಬಂದಿಗಳ ನಿರ್ಲಕ್ಷ್ಯ, ಮೂಲಭೂತ ಸೌಕರ್ಯಗಳ ನ್ಯೂನ್ಯತೆಯೇ ಬಡವರನ್ನು ಖಾಸಗಿ ಆಸ್ಪತ್ರೆಗಳತ್ತ ತಳ್ಳುತ್ತಿದೆ. ಸರ್ಕಾರಿ ಆಸ್ಪತ್ರೆಗಳ ಯೋಗ್ಯತೆ ಉತ್ತಮವಾಗಿದ್ದರೆ ಬಡವರು ತಮ್ಮ ಆಸ್ತಿ-ಪಾಸ್ತಿ ಮಾರಿ ಖಾಸಗಿ ಆಸ್ಪತ್ರೆಗೆ ಯಾಕೆ ಹೋಗುತ್ತಿದ್ದರು? ಎಂದು ಪ್ರಶ್ನಿಸಿದೆ.</p><p>ನಿಮ್ಮ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಡವರನ್ನೇ ಹೊಣೆ ಮಾಡುವುದು ಸರಿಯಲ್ಲ. ಮೊದಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಉದ್ಧಾರ ಮಾಡಿ, ಆಮೇಲೆ ಜನರಿಗೆ ಬುದ್ಧಿ ಹೇಳಿ ಎಂದು ತಿರುಗೇಟು ಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>