ಕಾಂಗ್ರೆಸ್ ಸರ್ಕಾರದಲ್ಲಿ ಅದೆಷ್ಟು ಜನರು ಡ್ರಗ್ಸ್ ಜಾಲಕ್ಕೆ ಸಿಲುಕಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದಾಗಿ ಕಾಳಸಂತೆಕೋರರು, ಕೊಲೆಗಡುಕರ ಹಾಗೂ ಡ್ರಗ್ಸ್ ಮಾಫಿಯಾದ ಚಟುವಟಿಕೆಗಳು ಸ್ವೇಚ್ಛೆಯಾಗಿ ನಡೆಯುತ್ತಿದೆ. ಸಮಾಜ ಹಾಗೂ ದೇಶದ ಭವಿಷ್ಯ ಬೆಳಗಬೇಕಾದ ವಿದ್ಯಾರ್ಥಿಗಳು, ಯುವಜನರನ್ನು ದಿಕ್ಕು ತಪ್ಪಿಸುವ ವಿದ್ರೋಹಿ ಮಾಫಿಯಾ ಶಕ್ತಿಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ ಎಂದಿದ್ದಾರೆ.
ಹಾದಿ-ಬೀದಿಗಳಲ್ಲಿ ರೇವ್ ಪಾರ್ಟಿಗಳು, ಡ್ರಗ್ಸ್ ಮಾಫಿಯಾ ಜಾಲ ಹರಡುತ್ತಿದೆ. ಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಜಾಲದ ವಿರುದ್ಧ ಈ ಕೂಡಲೇ ಸರ್ಕಾರ ಕಾರ್ಯಾಚರಣೆ ಆರಂಭಿಸದಿದ್ದರೆ ನಾಗರಿಕ ಸಮಾಜದ ಸುಭದ್ರತೆಗಾಗಿ ಬಿಜೆಪಿ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.