<p><strong>ಬೆಂಗಳೂರು:</strong> ಅಧಿಕಾರ ಬಂದಾಗ ಕಾರ್ಯಕರ್ತರು ಪಕ್ಷದಿಂದ ದೂರವಾಗಬಾರದು ಎಂಬ ಕಾರಣಕ್ಕಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಅಹವಾಲು ಆಲಿಸುವ ಕಾರ್ಯಕ್ರಮ ಆರಂಭವಾಗಿದೆ.</p>.<p>ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಜೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಅವರು ಶನಿವಾರ ಬೆಳಿಗ್ಗೆ ಅಹವಾಲು ಆಲಿಸಿದರು. ಸ್ವತಃ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೇ ಕಚೇರಿಗೆ ಬಂದು, ತುಮಕೂರು ಜಿಲ್ಲೆಯ ಕಲಾವಿದ ಎಚ್.ಎಂ.ಬಸವಪ್ರಭು ಎಂಬುವವರನ್ನು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯತ್ವಕ್ಕೆ ನಾಮಕರಣ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.</p>.<p>‘ನಾನು ನಡೆಸುತ್ತಿರುವ ಎರಡನೇ ಅಹವಾಲು ಸ್ವೀಕಾರ ಕಾರ್ಯಕ್ರಮ ಇದು. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಅಶ್ವತ್ಥನಾರಾಯಣ ಅವರೂ ಇಂತಹ ಅಹವಾಲು ಸ್ವೀಕಾರ ನಡೆಸಿ<br />ದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರು ಇದೇ ಹಾದಿ ತುಳಿಯಲಿದ್ದಾರೆ. ನಿರ್ದಿಷ್ಟ ದಿನಾಂಕ ನಿಗದಿಪಡಿಸುವ ವಿಚಾರವೂ ಇದೆ’ ಎಂದು ಸಚಿವ ಸಿ.ಟಿ.ರವಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಧಿಕಾರ ಸಿಕ್ಕಿದಾಗ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಸಚಿವರು ಸಿಗುವುದು ಕಡಿಮೆಯಾಗುತ್ತದೆ. ಆಗ ಮೊದಲಾಗಿ ನಮ್ಮಿಂದ ದೂರವಾಗುವವರು ಕಾರ್ಯಕರ್ತರು. ಇದನ್ನು ತಪ್ಪಿಸಬೇಕಾಗಿದೆ. ಕಮ್ಯುನಿಸ್ಟ್ ಪಕ್ಷದವರಲ್ಲಿ ಈಗಲೂ ಈ ವ್ಯವಸ್ಥೆ ಇದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವತಃ ಸಿ.ಎಂ ಅವರೇ ಪಕ್ಷದ ಕಚೇರಿಗೆ ಬಂದು ಅಹವಾಲು ಆಲಿಸುತ್ತಿದ್ದರು’ ಎಂದರು.</p>.<p><strong>ಕಾಂಗ್ರೆಸ್ ಅಧಿಕಾರ ಅವಧಿಯಲ್ಲೂ ಇತ್ತು: </strong>ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಒಂದಿಷ್ಟು ಸಮಯ ಈ ವ್ಯವಸ್ಥೆ ಜಾರಿಯಲ್ಲಿತ್ತು. ಕೆಲವು ತಿಂಗಳ ಬಳಿಕ ಮಾಧ್ಯಮಗಳ ಗಮನ ಕಡಿಮೆಯಾಗುತ್ತಲೇ ಅಹವಾಲು ಆಲಿಕೆಯ ವ್ಯವಸ್ಥೆಯೂ ನಿಂತುಹೋಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಧಿಕಾರ ಬಂದಾಗ ಕಾರ್ಯಕರ್ತರು ಪಕ್ಷದಿಂದ ದೂರವಾಗಬಾರದು ಎಂಬ ಕಾರಣಕ್ಕಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಅಹವಾಲು ಆಲಿಸುವ ಕಾರ್ಯಕ್ರಮ ಆರಂಭವಾಗಿದೆ.</p>.<p>ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಜೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಅವರು ಶನಿವಾರ ಬೆಳಿಗ್ಗೆ ಅಹವಾಲು ಆಲಿಸಿದರು. ಸ್ವತಃ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೇ ಕಚೇರಿಗೆ ಬಂದು, ತುಮಕೂರು ಜಿಲ್ಲೆಯ ಕಲಾವಿದ ಎಚ್.ಎಂ.ಬಸವಪ್ರಭು ಎಂಬುವವರನ್ನು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯತ್ವಕ್ಕೆ ನಾಮಕರಣ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.</p>.<p>‘ನಾನು ನಡೆಸುತ್ತಿರುವ ಎರಡನೇ ಅಹವಾಲು ಸ್ವೀಕಾರ ಕಾರ್ಯಕ್ರಮ ಇದು. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಅಶ್ವತ್ಥನಾರಾಯಣ ಅವರೂ ಇಂತಹ ಅಹವಾಲು ಸ್ವೀಕಾರ ನಡೆಸಿ<br />ದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರು ಇದೇ ಹಾದಿ ತುಳಿಯಲಿದ್ದಾರೆ. ನಿರ್ದಿಷ್ಟ ದಿನಾಂಕ ನಿಗದಿಪಡಿಸುವ ವಿಚಾರವೂ ಇದೆ’ ಎಂದು ಸಚಿವ ಸಿ.ಟಿ.ರವಿ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಧಿಕಾರ ಸಿಕ್ಕಿದಾಗ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಸಚಿವರು ಸಿಗುವುದು ಕಡಿಮೆಯಾಗುತ್ತದೆ. ಆಗ ಮೊದಲಾಗಿ ನಮ್ಮಿಂದ ದೂರವಾಗುವವರು ಕಾರ್ಯಕರ್ತರು. ಇದನ್ನು ತಪ್ಪಿಸಬೇಕಾಗಿದೆ. ಕಮ್ಯುನಿಸ್ಟ್ ಪಕ್ಷದವರಲ್ಲಿ ಈಗಲೂ ಈ ವ್ಯವಸ್ಥೆ ಇದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವತಃ ಸಿ.ಎಂ ಅವರೇ ಪಕ್ಷದ ಕಚೇರಿಗೆ ಬಂದು ಅಹವಾಲು ಆಲಿಸುತ್ತಿದ್ದರು’ ಎಂದರು.</p>.<p><strong>ಕಾಂಗ್ರೆಸ್ ಅಧಿಕಾರ ಅವಧಿಯಲ್ಲೂ ಇತ್ತು: </strong>ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಒಂದಿಷ್ಟು ಸಮಯ ಈ ವ್ಯವಸ್ಥೆ ಜಾರಿಯಲ್ಲಿತ್ತು. ಕೆಲವು ತಿಂಗಳ ಬಳಿಕ ಮಾಧ್ಯಮಗಳ ಗಮನ ಕಡಿಮೆಯಾಗುತ್ತಲೇ ಅಹವಾಲು ಆಲಿಕೆಯ ವ್ಯವಸ್ಥೆಯೂ ನಿಂತುಹೋಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>