ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJP ಟಿಕೆಟ್ ವಂಚನೆ ಪ್ರಕರಣ: 10ದಿನ ಸಿಸಿಬಿ ಪೊಲೀಸರ ಕಸ್ಟಡಿಗೆ ಹಾಲಶ್ರೀ ಸ್ವಾಮೀಜಿ

Published 20 ಸೆಪ್ಟೆಂಬರ್ 2023, 7:52 IST
Last Updated 20 ಸೆಪ್ಟೆಂಬರ್ 2023, 7:52 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, 10 ದಿನಗಳ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಒಂದೂವರೆ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಸ್ವಾಮೀಜಿಯನ್ನು ನಿನ್ನೆ ಒಡಿಶಾದಲ್ಲಿ ಬಂಧಿಸಲಾಗಿತ್ತು. 

ಚಾಮರಾಜಪೇಟೆ ಸಿಸಿಬಿ ಕಚೇರಿಯಲ್ಲಿ ಸ್ವಾಮೀಜಿ ವಿಚಾರಣೆ ನಡೆಯಲಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

ಮಂಗಳವಾರ ರಾತ್ರಿಯೇ ವಿಮಾನದಲ್ಲಿ ಅವರನ್ನು ಬೆಂಗಳೂರಿಗೆ ಕರೆತಂದು ಆಡುಗೋಡಿಯ ಟೆಕ್ನಿ‌ಕಲ್ ಸೆಲ್‌ಗೆ ಕಳುಹಿಸಲಾಗಿತ್ತು.

ಸ್ವಾಮೀಜಿ ಅವರು ವೇಷ ಬದಲಾವಣೆ ಮಾಡಿಕೊಂಡು, ಒಡಿಶಾದಲ್ಲಿ ಓಡಾಟ ನಡೆಸುತ್ತಿದ್ದರು. ಮಾಹಿತಿ‌‌ ಮೇರೆಗೆ ಒಡಿಶಾಕ್ಕೆ ತೆರಳಿದ್ದ ಸಿಸಿಬಿ ತಂಡವು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT