ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಒಂದನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, 10 ದಿನಗಳ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಒಂದೂವರೆ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಸ್ವಾಮೀಜಿಯನ್ನು ನಿನ್ನೆ ಒಡಿಶಾದಲ್ಲಿ ಬಂಧಿಸಲಾಗಿತ್ತು.