<p><strong>ಬೆಂಗಳೂರು</strong>: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ‘ಇಂದಿರಾ ಕ್ಯಾಂಟೀನ್’ ಹೆಸರನ್ನು ಬದಲಿಸಿ ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಹೆಸರು ಬದಲಾಯಿಸಲು ಮುಂದಾಗಿದೆ.</p>.<p>ಬೆಂಗಳೂರು ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗಳನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ನಾಮಕರಣ ಮಾಡಲಾಗುತ್ತದೆ.</p>.<p>ಮಾಜಿ ಪ್ರಧಾನಿ ಇಂದಿರಾಗಾಂಧಿ ಹೆಸರು ಬದಲಿಸಿದರೆ ತೀವ್ರ ಪ್ರತಿಭಟನೆಎದುರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದರು.ಕ್ಯಾಂಟೀನ್ಗಳಿಗೆ ಅನುದಾನ ನೀಡುತ್ತಿದ್ದು, ರಿಯಾಯಿತಿ ದರದಲ್ಲಿ ಆಹಾರ ಪೂರೈಸಲಾಗುತ್ತಿದೆ.</p>.<p>ಕಂದಾಯ ಸಚಿವ ಆರ್.ಅಶೋಕ್ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ಶಾಸಕ ರಾಜೂಗೌಡ ಅವರು ಇಂದಿರಾ ಕ್ಯಾಂಟೀನ್ಗಳಿಗೆ ಮಹರ್ಷಿ ವಾಲ್ಮೀಕಿ ಅನ್ನಕುಟೀರ ಎಂದು ಮರುನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿ ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಚರ್ಚಿಸಿದ ನಂತರ ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲಾಗುವುದು. ಬೆಂಗಳೂರು ನಗರ ನನ್ನ ವ್ಯಾಪ್ತಿಗೆ ಬರುವುದಿಲ್ಲ’ ಎಂದು ತಿಳಿಸಿದರು.</p>.<p><strong>ಕಾಂಗ್ರೆಸ್ ವಿರೋಧ</strong>: ‘ಬಡವರ ಪರವಾದ ಯೋಜನೆಗಳನ್ನು ರೂಪಿಸುವ ಇಚ್ಛಾಶಕ್ತಿ, ಯೋಗ್ಯತೆ ಇಲ್ಲದವರು ಮಾತ್ರ ಹೆಸರು ಬದಲಾವಣೆಯಂತಹ ತುಚ್ಛ, ದ್ವೇಷದ ರಾಜಕಾರಣ ಮಾಡಲು ಸಾಧ್ಯ’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.</p>.<p>ಹೆಸರು ಬದಲಾವಣೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ‘ಇಂದಿರಾ ಕ್ಯಾಂಟೀನ್’ ಹೆಸರನ್ನು ಬದಲಿಸಿ ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಪಕ್ಷದ ವಿರೋಧದ ನಡುವೆಯೂ ಹೆಸರು ಬದಲಾಯಿಸಲು ಮುಂದಾಗಿದೆ.</p>.<p>ಬೆಂಗಳೂರು ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗಳನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ನಾಮಕರಣ ಮಾಡಲಾಗುತ್ತದೆ.</p>.<p>ಮಾಜಿ ಪ್ರಧಾನಿ ಇಂದಿರಾಗಾಂಧಿ ಹೆಸರು ಬದಲಿಸಿದರೆ ತೀವ್ರ ಪ್ರತಿಭಟನೆಎದುರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದರು.ಕ್ಯಾಂಟೀನ್ಗಳಿಗೆ ಅನುದಾನ ನೀಡುತ್ತಿದ್ದು, ರಿಯಾಯಿತಿ ದರದಲ್ಲಿ ಆಹಾರ ಪೂರೈಸಲಾಗುತ್ತಿದೆ.</p>.<p>ಕಂದಾಯ ಸಚಿವ ಆರ್.ಅಶೋಕ್ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ಶಾಸಕ ರಾಜೂಗೌಡ ಅವರು ಇಂದಿರಾ ಕ್ಯಾಂಟೀನ್ಗಳಿಗೆ ಮಹರ್ಷಿ ವಾಲ್ಮೀಕಿ ಅನ್ನಕುಟೀರ ಎಂದು ಮರುನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿ ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಚರ್ಚಿಸಿದ ನಂತರ ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲಾಗುವುದು. ಬೆಂಗಳೂರು ನಗರ ನನ್ನ ವ್ಯಾಪ್ತಿಗೆ ಬರುವುದಿಲ್ಲ’ ಎಂದು ತಿಳಿಸಿದರು.</p>.<p><strong>ಕಾಂಗ್ರೆಸ್ ವಿರೋಧ</strong>: ‘ಬಡವರ ಪರವಾದ ಯೋಜನೆಗಳನ್ನು ರೂಪಿಸುವ ಇಚ್ಛಾಶಕ್ತಿ, ಯೋಗ್ಯತೆ ಇಲ್ಲದವರು ಮಾತ್ರ ಹೆಸರು ಬದಲಾವಣೆಯಂತಹ ತುಚ್ಛ, ದ್ವೇಷದ ರಾಜಕಾರಣ ಮಾಡಲು ಸಾಧ್ಯ’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.</p>.<p>ಹೆಸರು ಬದಲಾವಣೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>