ಅರಮನೆ ಮೈದಾನದಲ್ಲಿ ಬೆಂಗಳೂರು ಮಹಾನಗರದ ‘ಬೂತ್ ವಿಜಯ ಸಂಕಲ್ಪ ಸಮಾವೇಶ’ವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ‘25ರಿಂದ 30 ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕಾಗಿ ಬ್ಲ್ಯಾಕ್ಮೇಲ್ ಮಾಡುವ ಜೆಡಿಎಸ್, ಚುನಾವಣೆ ಬಳಿಕ ಅಧಿಕಾರಕ್ಕಾಗಿ ಕಾಂಗ್ರೆಸ್ ಮಡಿಲಿನಲ್ಲಿ ಬೆಚ್ಚಗೆ ಕೂರುತ್ತದೆ. ಆದ್ದರಿಂದ, ಜೆಡಿಎಸ್ಗೆ ಮತ ಹಾಕಿದರೆ, ಅದು ಕಾಂಗ್ರೆಸ್ಗೆ ಮತ ಹಾಕಿದಂತೆ’ ಎಂದು ಹರಿಹಾಯ್ದರು.